ಮನೆ ರಾಜ್ಯ 5 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

5 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

0

ಬೆಂಗಳೂರು (Bengaluru): ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್‌ ಅಲರ್ಟ್’ ಘೋಷಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ಮುಂದಿನ ಮೂರು ದಿನಗಳು ‘ರೆಡ್ ಅಲರ್ಟ್’ ನೀಡಲಾಗಿದೆ. ಶಿವಮೊಗ್ಗಕ್ಕೆ ‘ಆರೆಂಜ್ ಅಲರ್ಟ್’ ಹಾಗೂ ಬೀದರ್, ಕಲಬುರ್ಗಿ ಸೇರಿ 10 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 50 ಕಿ.ಮೀ.ನಿಂದ 60 ಕಿ.ಮೀ. ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದುಸೂಚಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದ್ದು, ಈ ಭಾಗದ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಉತ್ತರ ಒಳನಾಡು ಭಾಗಗಳಾದ ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರಗಿ, ಹಾವೇರಿ, ಗದಗ ಮತ್ತು ದಕ್ಷಿಣ ಒಳನಾಡು ಭಾಗಗಳಾದ ರಾಮನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲೂ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇತೆರೆಡೆ ಹವಾಮಾನ ವರದಿ:  ಬೆಂಗಳೂರಿನಲ್ಲಿ 24-19, ಮಂಗಳೂರಿನಲ್ಲಿ 27-24, ಶಿವಮೊಗ್ಗದಲ್ಲಿ 26-21, ಬೆಳಗಾವಿಯಲ್ಲಿ 26-21, ಮೈಸೂರಿನಲ್ಲಿ 23-19, ಮಂಡ್ಯದಲ್ಲಿ 25-21, ಕೊಡಗಿನಲ್ಲಿ 21-17, ರಾಮನಗರದಲ್ಲಿ 25-21, ಹಾಸನದಲ್ಲಿ 23-19, ಚಾಮರಾಜನಗರದಲ್ಲಿ 24-21, ಚಿಕ್ಕಬಳ್ಳಾಪುರದಲ್ಲಿ 26-20, ಕೋಲಾರದಲ್ಲಿ 26-21, ತುಮಕೂರಿನಲ್ಲಿ 26-20, ಉಡುಪಿಯಲ್ಲಿ 27-24,
ಚಿಕ್ಕಮಗಳೂರಿನಲ್ಲಿ 23-18, ದಾವಣಗೆರೆಯಲ್ಲಿ 26-22, ಚಿತ್ರದುರ್ಗದಲ್ಲಿ 26-21, ಹಾವೇರಿಯಲ್ಲಿ 27-22, ಬಳ್ಳಾರಿಯಲ್ಲಿ 29-23, ಗದಗದಲ್ಲಿ 27-21, ಕೊಪ್ಪಳದಲ್ಲಿ 27-22, ರಾಯಚೂರಿನಲ್ಲಿ 30-23, ಯಾದಗಿರಿಯಲ್ಲಿ 29-23, ವಿಜಯಪುರದಲ್ಲಿ 27-22, ಬೀದರ್‌ ನಲ್ಲಿ 27-22, ಕಲಬುರಗಿಯಲ್ಲಿ 29-23, ಬಾಗಲಕೋಟೆಯಲ್ಲಿ 28-23 ಡಿಗ್ರಿ ಸೆಲ್ಸಿಯಸ್ ಇರಲಿದೆ.