ಬೆಂಗಳೂರು(Bengaluru): ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ ಎಂದು ಹರಿಹಾಯ್ದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿರಲಿ, 1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ ಎಂದು ಹೇಳಿದ್ದಾರೆ.
ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದು, ಅಂದು ರಾಷ್ಟ್ರಪಿತರು ತಂದುಕೊಟ್ಟ ಸ್ವಾತಂತ್ರ್ಯ ಹಾಗೂ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ. ಇದರಲ್ಲಿ ಕಾಂಗ್ರೆಸ್ ಪಾತ್ರ ಶೂನ್ಯ ಎಂದು ಹೇಳಿದ್ದಾರೆ.
ನಾನು ಪಂಡಿತ್ ನೆಹರು, ಲಾಲ ಬಹದ್ದೂರ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿ.ಕೆ.ಶಿವಕುಮಾರ್ ಅವರು ಇತಿಹಾಸ ಓದಿದರೆ ಸತ್ಯ ಅರಿವಾಗುತ್ತದೆ ಎಂದರು.
ಸಂವಿಧಾನ ಕೊಟ್ಟವರು, ದೇಶದ ಮೊದಲನೇ ಸಂಪುಟದಲ್ಲಿ ಸಚಿವರಾಗಿದ್ದವರು ಡಾ.ಬಿ.ಆರ್.ಅಂಬೇಡ್ಕರ್ ಅವರು. ಅಂಥ ಮಹನೀಯರನ್ನು ಸಂಸತ್ತಿಗೇ ಮತ್ತೆ ಬಾರದಂತೆ ತಡೆದು, ಭಾರತದ ದೀನದಲಿತರ ದನಿಯನ್ನು ನಿರ್ದಯವಾಗಿ ಅಡಗಿಸಿದ ಪಕ್ಷದ ನಾಯಕರು ಇವತ್ತು ಸ್ವಾತಂತ್ಯದ ಭಜನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು. ಡಿ.ಕೆ.ಶಿವಕುಮಾರ್ ಅವರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಅಲ್ಲದೆ, ಪಕ್ಷದಲ್ಲಿ ನಿಮ್ಮ ಸ್ವಾತಂತ್ರ್ಯಹರಣ ಮಾಡುತ್ತಿರುವವರ ಕಡೆ ಗಮನ ಹರಿಸಿ ಎಂದು ಸಲಹೆ ನೀಡಿದ್ದಾರೆ.
ಈಗ ಸ್ವಾತಂತ್ರೋತ್ಸವದ ನಡಿಗೆ ಎಂದು ಹೊರಟಿದ್ದೀರಿ. ಯಾರ ಸ್ವಾತಂತ್ರ್ಯಕ್ಕಾಗಿ ಎಂದು ಸ್ವಲ್ಪ ಬಿಡಿಸಿ ಹೇಳುವಿರಾ? ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.