ಮನೆ ರಾಜ್ಯ ಸಿಎಂ ರೇಸ್ ನಲ್ಲಿ ನಾನಿಲ್ಲ: ಸಚಿವ ಎಸ್‌.ಟಿ ಸೋಮಶೇಖರ್

ಸಿಎಂ ರೇಸ್ ನಲ್ಲಿ ನಾನಿಲ್ಲ: ಸಚಿವ ಎಸ್‌.ಟಿ ಸೋಮಶೇಖರ್

0

ಮೈಸೂರು(Mysuru):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಸಂಬಂಧ ರಾಜ್ಯ ಕಾಂಗ್ರೆಸ್ ಮಾಡಿದ್ಧ ಟ್ವಿಟ್ ಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕರು  ಸಿಎಂ ಬದಲಾವಣೆಯ ವಿಚಾರವನ್ನು ತಳ್ಳಿ ಹಾಕಿದ್ದಾರೆ.

ಈ ಮಧ್ಯೆ ಸಿಎಂ ರೇಸ್ ನಲ್ಲಿ ನೀವಿದ್ಧೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಕೈಮುಗಿದು ಸ್ವಷ್ಟನೆ ನೀಡಿದ ಸಹಕಾರ ಸಚಿವ ಎಸ್‌.ಟಿ ಸೋಮಶೇಖರ್, ಸಿಎಂ ರೇಸ್ ನಲ್ಲಿ ನಾನಿಲ್ಲ. ಹೇಗೋ ಸಹಕಾರ ಸಚಿವನಾಗಿದ್ದೇನೆ. ಅದೂ ಇಷ್ಟ ಇಲ್ಲ ಅಂದ್ರೆ ಹೇಳಿ ಬಿಟ್ಟು  ಬಿಡುತ್ತೇನೆ. ಸಚಿವ ಸ್ಥಾನವನ್ನೂ ಬಿಡ್ತೀನಿ ಎಂದರು.

ಕಾಂಗ್ರೆಸ್ ಕೃಪ ಪೋಷಿತ ನಾಟಕ ಮಂಡಳಿ. ಕಾಂಗ್ರೆಸ್ ನಲ್ಲಿ ಒಳ ಬೇಗುದಿ ಆರಂಭವಾಗಿದೆ. ಶಮನ ಮಾಡಿಕೊಳ್ಳಲು ಬಿಜೆಪಿ ಮೇಲೆ ಬಾಣ ಪ್ರಯೋಗಿಸಿದ್ದಾರೆ. ಅವರು ಇವರ ಮೇಲೆ ಇವರು ಅವರ ಮೇಲೆ ಆಪಾದನೆ ಮಾಡ್ತಿದ್ದಾರೆ. ಆಪಾದನೆ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಟೀಕಿಸಿದರು.