ಮೈಸೂರು(Mysuru): ಬೆಂಗಳೂರಿನ ಆಶ್ರಯ ಹಸ್ತ ಟ್ರಸ್ಟ್ ವತಿಯಿಂದ ನಾರಾಯಣ ಹೃದಯಾಲಯ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಕುಂಬಾರಕೊಪ್ಪಲಿನ ನಗರ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಸಾಂಕ್ರಾಮಿಕವಲ್ಲದ ರೋಗಗಳಿಗಾಗಿ (NCB) ಬಳಸಲ್ಪಡುವ ಔಷದಗಳನ್ನು ಮುಂದಿನ 6 ತಿಂಗಳ ಬಳಕೆಗಾಗಿ ಉಚಿತವಾಗಿ ನೀಡಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ ಪ್ರಸಾದ್, ಕುಂಬಾರಕೊಪ್ಪಲಿನ ನಗರ ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯಾಧಿಕಾರಿಗಳಾದ ಡಾ ರಮ್ಯಾ ಅವರ ನೇತೃತ್ವದಲ್ಲಿ ಆರೋಗ್ಯಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ನಡೆಸಲಾದ ಅರೋಗ್ಯ ಸಮೀಕ್ಷೆಯಲ್ಲಿ 30 ವರ್ಷ ಹಾಗೂ ಮೇಲ್ಪಟ್ಟ ವಯೋಮಾನದವರಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚಿನ ಜನರು ಸಂಕ್ರಾಮಿಕವಲ್ಲದ ಕಾಯಿಲೆಗಳಾದ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ ಹಾಗೂ ಇನ್ನಿತರೆ ಕಾಯಿಲೆಗಳಿರುವುದು ತಿಳಿದುಬಂದಿತು, ಈ ರೀತಿಯ ಕಾಯಿಲಿಗಳಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕಾರದ ವತಿಯಿಂದ ಪೂರೈಸಲ್ಪಡುತ್ತಿರುವ ಔಷಧಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರದ ಕಾರಣ ಆಶ್ರಯ ಹಸ್ತ ಟ್ರಸ್ಟ್ ಗೆ ಔಷದ ಪೂರೈಸುವಂತೆ ಮನವಿ ಮಾಡಲಾಯಿತು ಎಂದರು.
ನಮ್ಮ ಮನವಿಯನ್ನು ಪರಿಗಣಿಸಿದ ಅವರು ಮುಂದಿನ 6 ತಿಂಗಳಿಗೆ ಸುಮಾರು 1000 ರೋಗಿಗಳಿಗೆ ಬೇಕಾಗುವಷ್ಟು ಔಷಧಗಳನ್ನು ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯವರ ಮೂಲಕ ಒದಗಿಸಿದ್ದಾರೆ. ಇವರ ಈ ಸೇವೆ ಶ್ಲಾಘನೀಯ ಎಂದು ತಿಳಿಸಿದರು.
ಆಶ್ರಯ ಹಸ್ತ ಟ್ರಸ್ಟ್ನ ಪೋರ್ಟ್ಫೋಲಿಯೋ ಮ್ಯಾನೇಜರ್ ವಿಶ್ವನಾಥ ರೆಡ್ಡಿ ಮಾತನಾಡಿ, ಸಾಂಕ್ರಾಮಿಕವಲ್ಲದ ರೋಗವನ್ನು ನಿರ್ವಹಿಸಲು ಉತ್ತಮ ಮಾರ್ಗವೆಂದರೆ ಆರಂಭಿಕ ಪತ್ತೆ, ಸರಿಯದೆ ಚಿಕಿತ್ಸೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕೆ.ಎಚ್. ಪ್ರಸಾದ್, ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯಾಧಿಕಾರಿ ಡಾ. ರಮ್ಯಾ, ಆಶ್ರಯ ಹಸ್ತ ಟ್ರಸ್ಟ್ ನ ಸೀನಿಯರ್ ಪೋರ್ಟ್ಫೋಲಿಯೋ ಮ್ಯಾನೇಜರ್ ವಿಕ್ರಮ್ ಪಟೇಲ್, ವಿಶ್ವನಾಥ ರೆಡ್ಡಿ, ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾರುಕಟ್ಟೆ ಮುಖ್ಯಸ್ಥರಾದ ಕೆ. ವಿ. ಕಾಮತ್, ನಗರ ಪಾಲಿಕ ಸದಸ್ಯರಾದ ಪೈಲ್ವಾನ್ ಶ್ರೀನಿವಾಸ್ ಮತ್ತು ಉಷಾ ಕುಮಾರ್ ಹಾಜರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.