ಮನೆ ರಾಜ್ಯ ಮೈಸೂರು: ಜಮೀನಿನಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಮೈಸೂರು: ಜಮೀನಿನಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

0

ಮೈಸೂರು(Mysuru):  ‌ಜಿಲ್ಲೆಯ ಹಂಪಾಪುರ ಸಮೀಪದ ಚಿಕ್ಕೆರೆಯೂರು ಗ್ರಾಮದ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಬಿದ್ದಿದೆ.

ಗ್ರಾಮದ ಅನಂದ ಎಂಬುವವರ ಜಮೀನಿನಲ್ಲಿ ಬೋನಿಡಲಾಗಿತ್ತು. ಈ ಬೋನಿಗೆ 4 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ ಎನ್ನಲಾಗಿದೆ.

ಚಿರತೆಯು ಬೋನಿಗೆ‌ ಬಿದ್ದಿರುವ ಮಾಹಿತಿಯನ್ನು ರೈತರು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದು, ಸ್ಥಳಕ್ಕೆ ಬಂದ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಚಿರತೆಯನ್ನು ರಕ್ಷಿಸಿದ ನಂತರ ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು.

ಚಿರತೆ ಬೋನಿಗೆ ಬಿದ್ದಿರುವ ಸುದ್ದಿ ಹರಡುತ್ತಿದ್ದಂತೆಯೇ, ವೀಕ್ಷಿಸುವುದಕ್ಕಾಗಿಯೇ ಗ್ರಾಮಸ್ಥರು ತಂಡೋಪ ತಂಡವಾಗಿ ಬಂದಿದ್ದರು.ಈ ಭಾಗದಲ್ಲಿ ಇನ್ನೂ ಹೆಚ್ಚಿನ ಚಿರತೆಗಳಿವೆ. ಹೀಗಾಗಿ, ಗ್ರಾಮದಲ್ಲಿ ಮತ್ತೊಂದು ಬೋನಿಡಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.