ಮೈಸೂರು(Mysuru): ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿಗೆ ಆಗಮಿಸಿ ಅರಮನೆ ಆವರಣದಲ್ಲಿ ಬಿಡಾರ ಹೂಡಿರುವ ಗಜಪಡೆಗೆ ಸರಳ ತಾಲೀಮು ಪ್ರಾರಂಭಗೊಂಡಿದೆ.
ಶುಕ್ರವಾರ ಬೆಳಿಗ್ಗೆ ಮಾವುತರು, ಕಾವಾಡಿಗಳು ಅರಮನೆಯ ಒಳಗಿನ ಪಥಗಳಲ್ಲಿ ದಸರಾ ಆನೆಗಳು ಸಾಗಿದವು. ಕ್ಯಾಪ್ಟನ್ ‘ಅಭಿಮನ್ಯು’ವನ್ನು ಉಳಿದ 8 ಆನೆಗಳು ಅನುಸರಿಸಿದವು.
ಆಹಾರದ ದಾಸ್ತಾನು ಶೆಡ್ನಲ್ಲಿ ಭತ್ತದ ಹುಲ್ಲು ಸಂಗ್ರಹಿಸಿದ್ದರೆ, ಆಲದ ಸೊಪ್ಪನ್ನು ಅಭಿಮನ್ಯು, ಚೈತ್ರಾ ಆನೆಗಳಿದ್ದ ಶೆಡ್ ಸಮೀಪದ ಅಂಗಳದಲ್ಲಿ ಇರಿಸಲಾಗಿತ್ತು. ಮಧ್ಯಾಹ್ನ ಬಿಸಿಲೇರುತ್ತಿದ್ದಂತೆ ದಣಿದಿದ್ದ ಆನೆಗಳಿಗೆ ಸ್ನಾನದ ತೊಟ್ಟಿಗೆ ಒಂದೊಂದಾಗಿ ಕರೆದೊಯ್ದು ಮಜ್ಜನ ಮಾಡಿಸಲಾಯಿತು.
ಮಾವುತ, ಕಾವಾಡಿ ಅವರೊಂದಿಗೆ ಮಕ್ಕಳು ಆನೆ ಮೈಯನ್ನು ಉಜ್ಜಿದರು. ಆನೆಗಳ ಬಿಡಾರದಲ್ಲಿ ಆಲದ ಸೊಪ್ಪು, ಹಸಿರು ಹುಲ್ಲಿನ ಕಂತೆಗಳನ್ನು ಗಜಗಳಿಗೆ ಮಾವುತರು, ಕಾವಾಡಿಗರ ಮಕ್ಕಳು ನೀಡುತ್ತಿದ್ದರು.
‘ಅಭಿಮನ್ಯು’, ‘ಚೈತ್ರಾ’ ಜೊತೆಯಲ್ಲಿದ್ದರೆ, ಭುವನೇಶ್ವರಿ ದೇವಾಲಯದ ಪಕ್ಕದಲ್ಲಿರುವ ಶೆಡ್ನಲ್ಲಿ ಧನಂಜಯ–ಕಾವೇರಿ, ಮುಖ್ಯ ಶೆಡ್ನಲ್ಲಿ ಗೋಪಾಲಸ್ವಾಮಿ, ಭೀಮ, ಮಹೇಂದ್ರ, ಅರ್ಜುನ, ಲಕ್ಷ್ಮಿ ಇದ್ದರು.
ಆನೆಗಳೊಂದಿಗೆ ಪ್ರವಾಸಿಗರ ಸೆಲ್ಫಿ:
ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗಾಗಿ ಬಂದಿದ್ದ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಆನೆಗಳನ್ನು ವೀಕ್ಷಿಸಿದರು. ಪ್ರವಾಸಿಗಳು ಆನೆ ಬಿಡಾರಗಳತ್ತ ಧಾವಿಸಿದಾಗ ಅರಣ್ಯ ಇಲಾಖೆಯ ಸಿಬ್ಬಂದಿ, ಆನೆಗಳ ಹತ್ತಿರ ಸುಳಿಯದಂತೆ ನಿಗಾ ವಹಿಸಿದರು.
ಪ್ರವಾಸಿಗರು ತುಸು ದೂರದಲ್ಲಿ ನಿಂತು ಸೆಲ್ಫಿ ತೆಗೆದುಕೊಂಡರು. ಹತ್ತಿರ ಹೋಗಲು ಪ್ರಯತ್ನಿಸಿದವರನ್ನು, ಫೋಟೊ ತೆಗೆಯುತ್ತಿದ್ದವರನ್ನು ಸಿಬ್ಬಂದಿ ಬೆದರಿಸಿ ಕಳುಹಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.