ಮನೆ ಸುದ್ದಿ ಜಾಲ ವಿಶ್ವ ವಿಖ್ಯಾತ ನಾಡ ಹಬ್ಬ ಮೈ ಸೂರು ದಸರಾ ಮಹೋತ್ಸವ ಹಿನ್ನೆಲೆ ಗಜಪಡೆ ತಾಲೀಮು ಆರಂಭ

ವಿಶ್ವ ವಿಖ್ಯಾತ ನಾಡ ಹಬ್ಬ ಮೈ ಸೂರು ದಸರಾ ಮಹೋತ್ಸವ ಹಿನ್ನೆಲೆ ಗಜಪಡೆ ತಾಲೀಮು ಆರಂಭ

0

ಮೈಸೂರು (Mysuru): ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ.ಇಂದಿನಿಂದ ಜಂಬೂಸವಾರಿಗೆ ಗಜಪಡೆ ತಾಲೀಮು ಆರಂಭಿಸಲಾಗಿದೆ.

ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿ ದಿನ ಬೆಳಿಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ.ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಅನೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ತಾಲೀಮು ಆರಂಭಿಸಲಾಯಿತು.

ಕೋವಿಡ್ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಿತ್ತು.ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ತಾಲೀಮಿಗೆ ತೆರಳುತ್ತಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆಆರ್ ಸರ್ಕಲ್ , ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ಸರ್ಕಲ್ , ಬಂಬೂಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತವೆ. ಮತ್ತೆ ಬನ್ನಿಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಅರಣ್ಯ ಅಧಿಕಾರಿ ಕರಿಕಾಳನ್ ಮಾತನಾಡಿ, ದಸರಾ ಮಹೋತ್ಸವ ಹಿನ್ನಲೆ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ.
ಆನೆಗಳಿಗೆ ತೂಕ ಮಾಡಿಸಲಾಗಿದೆ.
ಎಲ್ಲ ಅನೆಗಳು ಅರೋಗ್ಯವಾಗಿದೆ. ಒಂದು ವಿಶೇಷವೆನೆಂದರೇ
ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ.
ಒಂದು ವಾರದ ನಂತರ ಬಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.