ಮನೆ ರಾಜ್ಯ ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್: ಸಂಗೀತಮಯ ಸ್ವಾತಂತ್ರ್ಯ ದಿನಾಚರಣೆ

ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್: ಸಂಗೀತಮಯ ಸ್ವಾತಂತ್ರ್ಯ ದಿನಾಚರಣೆ

0

ಮೈಸೂರು(Mysuru): ನಗರದ ರಾಮಾನುಜ ಮುಖ್ಯ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಎದುರು ತಾಳ ವಾದ್ಯ ಪ್ರತಿಷ್ಠಾನದ ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ‘ಸಂಗೀತಮಯ’ವಾಗಿ ಆಚರಿಸಲಾಯಿತು.

ಇಂದು ಈ ವಿಶೇಷ ಪ್ರದರ್ಶನದಲ್ಲಿ ಆ ಶಾಲೆಯ ಮಕ್ಕಳು ಪಂಚ ತಾಳವಾದ್ಯಗಳ ಪ್ರದರ್ಶನ (ಐದು ಡ್ರಮ್ಸ್‌)ವನ್ನು ನೀಡಿದರು.

ರಾಷ್ಟ್ರ ಗೀತೆ ಮತ್ತು ದೇಶ ಭಕ್ತಿ ಗೀತೆಗಳ ವಾದ್ಯ ಸಂಗೀತವನ್ನು ಪ್ರಸ್ತುತಪಡಿಸಿ ಪ್ರೇಕ್ಷಕರ ಮನಸೂರೆಗೊಂಡರು. ಮಕ್ಕಳು ಕೆಲ ಹೊತ್ತು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಾದ್ಯ ಬಾರಿಸಿದ್ದು ವಿಶೇಷವಾಗಿತ್ತು.

ಈ ಮೂಲಕ ಸ್ವಾತಂತ್ರ್ಯ ದಿನವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಿದರು.

ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಮುಖಂಡರಾದ ವಿಕ್ರಂ ಅಯ್ಯಂಗಾರ್, ಕಲಾವಿದ ಅಜಯ್‌ ಶಾಸ್ತ್ರಿ, ಪ್ರಸಾದ್ ಸ್ಕೂಲ್ ಒಫ್ ರಿಧಮ್ಸ್‌ ಸಂಸ್ಥಾಪಕ ಡಾ.ಸಿ.ಆರ್.ರಾಘವೇಂದ್ರ ಪ್ರಸಾದ್ ಪಾಲ್ಗೊಂಡಿದ್ದರು.