ಮನೆ ರಾಜ್ಯ ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ: ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ: ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

0

ಶಿವಮೊಗ್ಗ (Shivamogga): ಸಾವರ್ಕರ್ ಫೋಟೋ ವಿವಾದದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಫೈರಿಂಗ್‌ ನಡೆಸಿ ವಶಕ್ಕೆ ಪಡೆದಿದ್ದಾರೆ.

ಮಾರ್ನಾಮಿಬೈಲ್ ನ ಜಬೀವುಲ್ಲಾ ಮೇಲೆ ಪೊಲೀಸರು ಫೈರಿಂಗ್ ಮಾಡಿರೋ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಜಬೀವುಲ್ಲಾ ಬಂಧನಕ್ಕೆ ಪೊಲೀಸರು ತೆರಳಿದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಜಬೀವುಲ್ಲಾ ಕಾಲಿಗೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಕುರಿ ಫೈರ್ ಮಾಡಿದ್ದಾರೆ. ಮಂಜುನಾಥ್ ಕುರಿ ಶಿವಮೊಗ್ಗ ವಿನೋಬನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇನ್ನು ಗುಂಡೇಟು ತಿಂದಿರುವ ಜಬೀವುಲ್ಲಾನನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಚಾಕು ಇರಿತ ಪ್ರಕರಣ ಸಂಬಂಧ ಈಗಾಗಲೇ ದೊಡ್ಡಪೇಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25) ನನ್ನು ಬಂಧಿಸಲಾಗಿದೆ. ಮತ್ತಿಬ್ಬರ ಬಂಧನಕ್ಕೆ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ.

ಎರಡು ದಿನಗಳ ಹಿಂದಷ್ಟೇ ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಾವರ್ಕರ್‌ ಚಿತ್ರ ಹಾಕಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಅದರ ಮುಂದುವರಿದ ಭಾಗವಾಗಿ ಅಮೀರ್‌ ಅಹಮ್ಮದ್‌ ವೃತ್ತದಲ್ಲಿ ಸಾವರ್ಕರ್‌ ಚಿತ್ರ ತೆರವುಗೊಳಿಸಿದ್ದಕ್ಕೆ ಗಲಾಟೆಯಾಗಿದೆ. ಗುಂಪನ್ನು ಚದುರಿಸುವುದಕ್ಕಾಗಿ ಪೊಲೀಸರು ಲಘು ಲಾಠಿ ಪ್ರಹಾರ ಕೂಡ ಮಾಡಿದ್ದರು. ರಾಜಸ್ಥಾನ ಮೂಲದ ಹಾಗೂ ನಗರದ ಅಂಗಡಿಯೊಂದರಲ್ಲಿ ಕಾರ್ಯರ್ವನಿರ್ವಹಿಸುತ್ತಿದ್ದ ಪ್ರೇಮ್‌ ಸಿಂಗ್‌ ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿತ್ತು. ನಗರದಲ್ಲಿ 144 ಅಡಿ ನಿಷೇಧಾಜ್ಞೆ ಜಾರಿಯಲ್ಲಿದೆ.‌