ಮನೆ ಮನರಂಜನೆ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂ. ದೇಣಿಗೆ ನೀಡಿದ ನಿರ್ದೇಶಕ ಪ್ರಶಾಂತ್‌ ನೀಲ್‌

ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂ. ದೇಣಿಗೆ ನೀಡಿದ ನಿರ್ದೇಶಕ ಪ್ರಶಾಂತ್‌ ನೀಲ್‌

0

ಬೆಂಗಳೂರು (Bengaluru): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಿರ್ದೇಶಕ ಪ್ರಶಾಂತ್‌ ನೀಲ್‌ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸಕ್ಕೆ ಮುಂದಾಗಿದ್ದಾರೆ.

ತಮ್ಮ ಹುಟ್ಟೂರಾದ ಆಂಧ್ರದ ನೀಲಕಂಠ ಪುರಂಗೆ ಪ್ರಶಾಂತ್‌ ನೀಲ್‌ ಭೇಟಿ ನೀಡಿದ್ದಾರೆ. ಈ ವೇಳೆ ಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಎಲ್‌.ವಿ.ಪ್ರಸಾದ್‌ ಕಣ್ಣಿನ ಆಸ್ಪತ್ರೆ ನಿರ್ಮಾಣಕ್ಕೆ ಸುಮಾರು 50 ಲಕ್ಷ ರೂ. ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ವಿಚಾರವನ್ನು ಅವರ ಸಂಬಂಧಿ ಡಾ.ಎನ್.ರಘುವೀರ ರೆಡ್ಡಿ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಪ್ರಶಾಂತ್‌ ನೀಲ್‌ ಅವರ ತಂದೆ ಶುಭಾಷ್‌ ಅವರು ಹುಟ್ಟಿದ್ದು 1947 ಆಗಸ್ಟ್‌ 15. ಹೀಗಾಗಿ ಈ ದಿನದಂದೇ ಪ್ರಶಾಂತ್‌ ನೀಲ್‌ ಒಳ್ಳೆಯ ಕೆಲಸ ಮಾಡಿದ್ದಾರೆ.

ಹುಟ್ಟೂರಿನ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಊರಿನಲ್ಲಿ ಇಷ್ಟು ಸುಂದರವಾದ ದೇವಾಲಯ ನೋಡಿ ಖುಷಿಯಾಯಿತು. ನಮ್ಮ ಚಿಕ್ಕಪ್ಪನವರು ದೇವಾಲಯವನ್ನು ಚೆನ್ನಾಗಿ ಅಭಿವೃದ್ಧಿ ಪಡಿಸಿದ್ದಾರೆ. ನಮ್ಮ ಪೂರ್ವಜರು ಪೂಜೆ ಮಾಡಿದ ದೇವಾಲಯವಿದು. ಮತ್ತೆ ಇಲ್ಲಿಗೆ ಬಂದಿದ್ದು, ಸಂತಸದ ಸಂಗತಿ ಎಂದರು.