ಮನೆ ಸುದ್ದಿ ಜಾಲ ದಲಿತ ಬಾಲಕನ ಹತ್ಯೆ ಖಂಡಿಸಿ ಪ್ರತಿಭಟನೆ

ದಲಿತ ಬಾಲಕನ ಹತ್ಯೆ ಖಂಡಿಸಿ ಪ್ರತಿಭಟನೆ

0

ಮೈಸೂರು (Mysuru): ರಾಜಸ್ಥಾನದ ಶಾಲೆಯೊಂದರಲ್ಲಿ ಕುಡಿಯುವ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಶಿಕ್ಷಕ ದಲಿತ ಬಾಲಕನ ಹತ್ಯೆ ಮಾಡಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದ ಸದಸ್ಯರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಾನಸಗಂಗೋತ್ರಿಯ ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಸೇರಿದ ಪ್ರತಿಭಟನಾಕಾರರು ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಎಚ್.ಎಸ್.ನಟರಾಜ ಮಾತನಾಡಿ, ಬಡವರು, ಶೋಷಿತರ ಮೇಲೆ ಗದಾಪ್ರಹಾರ ಮುಂದುವರಿದಿದೆ. ಬ್ರಿಟಿಷರ ವಿರುದ್ಧ ಸಾಮಾನ್ಯ ಜನರೂ ಹೋರಾಡಿದ್ದಾರೆ. ಆದರೆ, ಸ್ವತಂತ್ರ ಭಾರತದಲ್ಲಿ ದಲಿತರನ್ನು ಹೀನಾಯವಾಗಿ ಇನ್ನೂ ನಡೆಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಕಲ್ಲಹಳ್ಳಿ ಕುಮಾರ್, ಅವಿನಾಶ್, ರಂಗನಾಥ್, ಕೆ.ಮಹದೇವಸ್ವಾಮಿ, ಜಗದೀಶ್, ಮಹೇಶ್, ಕಲ್ಲಪ್ಪ, ಟಿ.ಎಂ.ಕಾರ್ತಿಕ್ ಮತ್ತಿತರರು ಭಾಗವಹಿಸಿದ್ದರು.