ಮೈಸೂರು(Mysuru): ಕಮಿಷನ್ ಪಡೆಯಲು ಸರ್ಕಾರವನ್ನು ತಳ್ಳುತ್ತಿದ್ದಾರಷ್ಟೆ. ಸಚಿವರು ಹಣ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಟೀಕಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ನಡೀತಾ ಇಲ್ಲ. ಮ್ಯಾನೇಜ್ ಮಾಡ್ತಾ ಇದ್ದೀವಷ್ಟೇ ಎಂಬ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಯು ಸಂಪೂರ್ಣ ಸತ್ಯವಾದುದು. ಈ ಸರ್ಕಾರವು ಎಲ್ಲ ರಂಗಗಳಲ್ಲೂ ಸಂಪೂರ್ಣ ವಿಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
16 ಜಿಲ್ಲೆಗಳಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಆ ಸಂತ್ರಸ್ತರಿಗೆ ಸರ್ಕಾರ ಸ್ಪಂದಿಸಲಿಲ್ಲ. ಆಡಳಿತ ಯಂತ್ರ ಸತ್ತು ಹೋಗಿದೆ ಎಂದು ಆರೋಪಿಸಿದರು.
ಹಿಂದೂ-ಮುಸ್ಲಿಮರನ್ನು ಎತ್ತಿ ಕಟ್ಟಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕೋಮು ಗಲಭೆ ನಡೆಯುವಂತೆ ಹುನ್ನಾರ ನಡೆಸಿ ಲಾಭ ಮಾಡಿಕೊಳ್ಳಲು ಯತ್ನಿಸಲಾಗುತ್ತಿದೆ. ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ. ಹೀಗಾಗಿ, ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಯಾದ ಮೇಲೆ ಯಾವ ಯೋಜನೆ ಕೊಟ್ಟಿದ್ದೀರಿ ಎನ್ನುವುದನ್ನು ಬಸವರಾಜ ಬೊಮ್ಮಾಯಿ ತಿಳಿಸಬೇಕು ಎಂದು ಸವಾಲು ಹಾಕಿದರು.
ಸಾವರ್ಕರ್ ಮೀರ್ ಸಾಧಕ್ ಕೆಲಸ ಮಾಡಿದ್ದರಿಂದ ಅವರಿಗೆ ಬ್ರಿಟಿಷರು ಪಿಂಚಣಿ ಕೊಡುತ್ತಿದ್ದರು ಎಂದು ಆರೋಪಿಸಿದರು.
ಲೋಕಾಯುಕ್ತಕ್ಕೆ ವರದಿ ಸಲ್ಲಿಸುವ ಅಧಿಕಾರವಷ್ಟೆ ಇತ್ತು. ಆದ್ದರಿಂದ ಸಿದ್ದರಾಮಯ್ಯ ಅವರು ಎಸಿಬಿ ಸ್ಥಾಪಿಸಿದರು. ಆದರೆ, ಲೋಕಾಯುಕ್ತವನ್ನು ಮುಚ್ಚಲಿಲ್ಲ. ಬಿಜೆಪಿ ಸರ್ಕಾರವು ಎಸಿಬಿಯನ್ನು ಬಲಪಡಿಸದೆ ಭ್ರಷ್ಟಾಚಾರ, ವಸೂಲಾತಿ ಕೇಂದ್ರವನ್ನಾಗಿ ಮಾಡಿಕೊಂಡಿತು ಎಂದರು.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮೊದಲಾದ ನಾಯಕರ ಬಗ್ಗೆ ಸಾಮಾಜಿಕ ಕಾರ್ಯಕರ್ತ ಏಕವಚನ ಬಳಸುವುದು ಸರಿಯಲ್ಲ. ಪ್ರಚಾರದ ಗೀಳಿಗಾಗಿ ಮನಬಂದಂತೆ ಮಾತನಾಡಬಾರದು. ನಾಲಿಗೆಯ ಮೇಲೆ ಹಿಡಿತವಿಟ್ಟುಕೊಳ್ಳಬೇಕು. ಸಮಾಜಕ್ಕೆ ಏನೂ ಕೊಡುಗೆ ನೀಡದೆ ಆರೋಪಿಸುವುದು ಸರಿಯಲ್ಲ. ಏಕವಚನದಲ್ಲಿಯೇ ಮಾತು ಮುಂದುವರಿಸಿದರೆ ಸಹಿಸಿಕೊಳ್ಳಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸಮಾಜಕ್ಕೆ ಕೊಟ್ಟಿರುವ ಕೊಡುಗೆ ಏನು ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಹಿರೇಮಠ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಮಾತನಾಡುವುದಿಲ್ಲವೇಕೆ? ಎಂದು ಕೇಳಿದ ಅವರು, ಭ್ರಷ್ಟಾಚಾರ ಮಾಡಿರುವ ಬಗ್ಗೆ ದಾಖಲೆಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ, ತಪ್ಪಿತಸ್ಥರೆಂದು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.