ಮನೆ ಅಪರಾಧ ದಾವಣಗೆರೆ: ಕೆರೆಗೆ ಬಿದ್ದು ಪ್ರೇಮಿಗಳ ಆತ್ಮಹತ್ಯೆ

ದಾವಣಗೆರೆ: ಕೆರೆಗೆ ಬಿದ್ದು ಪ್ರೇಮಿಗಳ ಆತ್ಮಹತ್ಯೆ

0

ದಾವಣಗೆರೆ(Davanagere): ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಕೂಗಳತೆಯಲ್ಲಿರುವ ಕೆರೆಗೆ ಬಿದ್ದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಬುಧವಾರ ಇಬ್ಬರು ಬೈಕ್​ನಲ್ಲಿ ಬೆಂಕಿಕೆರೆ ಗ್ರಾಮದ ಕೆರೆಯ ಬಳಿ ಬಂದಿದ್ದು, ನಂತರ ಚರಣ್ ಬೆಂಗಳೂರಿನಲ್ಲಿ ಇರುವ ತಂದೆಗೆ ಮತ್ತು ಸ್ನೇಹಿತನಿಗೆ ಕರೆ ಮಾಡಿ ಇಬ್ಬರು ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ.

ನಂತರ ಸಂಬಂಧಿಕರ ಮಾಹಿತಿ ಮೇರೆಗೆ ಪೊಲೀಸರು ಬೆಂಕಿಕೆರೆ ಗ್ರಾಮದ ಕೆರೆಯ ಬಳಿ ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ ಯುವಕನ ಬೈಕ್ ಮತ್ತು ಇಬ್ಬರ ಚಪ್ಪಲಿ ಪತ್ತೆಯಾಗಿದೆ. ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಕೆರೆಯಲ್ಲಿ ಯುವಕ ಮತ್ತು ಯುವತಿಯ ಹುಡುಕಾಟ ನಡೆಸಿದ್ದು, ಶವ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ನಡೆಸಿದ್ದು ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಇಬ್ಬರ ಪ್ರೀತಿಗೆ ಮನೆಯವರ ವಿರೋಧವಿದ್ದು, ಇದರಿಂದ ಬೇಸರಗೊಂಡಿದ್ದ ಜೋಡಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.