ನವದೆಹಲಿ(Newdelhi): ಶಿಕ್ಷೆಯ ಪ್ರಮಾಣವನ್ನು ಹೆಚ್ಚಳ ಮಾಡುವ ಮುನ್ನ ಆಪಾದಿತರಿಗೆ ಹೈಕೋರ್ಟ್ಗಳು ನೋಟಿಸ್ ನೀಡಬೇಕು. ಇದರಿಂದ ಮೇಲ್ಮನವಿ ಸಲ್ಲಿಸಲು ಆಪಾದಿತರಿಗೆ ಅವಕಾಶ ಒದಗಿಸಿದಂತಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಪಿ.ಎಸ್.ನರಸಿಂಹ ಅವರಿದ್ದ ನ್ಯಾಯಪೀಠ, ಕೊಲೆ ಪ್ರಕರಣದ ಇಬ್ಬರು ಆಪಾದಿತರಿಗೆ ಜೀವಿತಾವಧಿ ವರೆಗೆ ಜೈಲು ಶಿಕ್ಷೆ ವಿಧಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ ಸಂದರ್ಭದಲ್ಲಿ ಈ ಮಾತನ್ನು ಹೇಳಿದೆ.
ಹೈಕೋರ್ಟ್ ತನಗಿರುವ ಅಧಿಕಾರವನ್ನು ಚಲಾಯಿಸುವ ಮೂಲಕ, ಆಪಾದಿತರಿಗೆ ನೀಡಿರುವ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಬಹುದು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಇಂತಹ ಕ್ರಮ ಕೈಗೊಳ್ಳುವ ಮುನ್ನ ಅರ್ಜಿದಾರರಿಗೆ ನೋಟಿಸ್ ನೀಡಬೇಕಿತ್ತು. ಆದರೆ, ಈ ಪ್ರಕರಣದಲ್ಲಿ ಈ ಕಾರ್ಯವಾಗಿಲ್ಲ ಎಂದು ನ್ಯಾಯಪೀಠ ಹೇಳಿತು.
ಅರ್ಜಿದಾರರಿಗೆ ಮರಣ ದಂಡನೆ ವಿಧಿಸದಿರುವ ಸೆಷನ್ಸ್ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿಲ್ಲ ಎಂಬ ಅಂಶವನ್ನು ಸಹ ನ್ಯಾಯಪೀಠ ಪರಿಗಣಿಸಿದೆ.
ಈ ಎಲ್ಲ ಕಾರಣಗಳಿಂದ ಪರಿಶೀಲಿಸಿದಾಗ, ಅರ್ಜಿದಾರರಿಗೆ ಮುಂಚಿತವಾಗಿ ನೋಟಿಸ್ ನೀಡಿ, ತಮ್ಮನ್ನು ಸಮರ್ಥಿಸಿಕೊಳ್ಳಲು ಅವರಿಗೆ ಅವಕಾಶವನ್ನು ನೀಡದೆಯೇ ಶಿಕ್ಷೆಯ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ ಎಂದೂ ನ್ಯಾಯಪೀಠ ಹೇಳಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.