ಮನೆ ರಾಜಕೀಯ ಡಿ.ದೇವರಾಜ ಅರಸು ಜನ್ಮದಿನ: ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ನಮನ

ಡಿ.ದೇವರಾಜ ಅರಸು ಜನ್ಮದಿನ: ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ನಮನ

0

ಬೆಂಗಳೂರು(Bengaluru): ಹಿಂದುಳಿದ ವರ್ಗಗಳ ಆಶಾ ಕಿರಣ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ನಮನ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಹಿಂದುಳಿದ ವರ್ಗಗಳ ಆಶಾಕಿರಣ, ತಮ್ಮ ಆಡಳಿತದಲ್ಲಿ ಅನೇಕ ಆಮೂಲಾಗ್ರ ಬದಲಾವಣೆ ತಂದು, ಆಡಳಿತಕ್ಕೆ ಹೊಸ ಭಾಷ್ಯ ನೀಡಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ದೇವರಾಜ ಅರಸ್ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು ಎಂದು ನಮನ ಸಲ್ಲಿಸಿದ್ದಾರೆ.

ಅಧಿಕಾರ, ಸಂಪತ್ತು ಮತ್ತು ಅವಕಾಶದ ಬಾಗಿಲನ್ನು ಎಲ್ಲರಿಗೂ ತೆರೆದು ಸಮಪಾಲು- ಸಮಬಾಳು ನೀಡಲು ಶ್ರಮಿಸಿದವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು. ಅವರ ಬದುಕು ಮತ್ತು ಸಾಧನೆ ಆಳುವವರಿಗೆಲ್ಲರಿಗೂ ಒಂದು ಆದರ್ಶದ ಮಾದರಿ. ಪರಿವರ್ತನೆಯ ಹರಿಕಾರನಿಗೆ ಹುಟ್ಟು ಹಬ್ಬದ ದಿನ ಗೌರವದಿಂದ ನಮಿಸುವೆ  ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಭೂ ಸುಧಾರಣೆಯು ಸೇರಿದಂತೆ ಅನೇಕ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದು ಕರ್ನಾಟಕವನ್ನು ಅಭಿವೃದ್ಧಿಪರ ರಾಜ್ಯವನ್ನಾಗಿ ರೂಪಿಸಿದ ಮಾಜಿ ಮುಖ್ಯಮಂತ್ರಿಗಳಾದ ದೇವರಾಜ ಅರಸು ಅವರ ಜಯಂತಿ ದಿನದಂದು ಆ ಮಹಾನ್ ಚೇತನಕ್ಕೆ ನನ್ನ ನಮನಗಳು  ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.