ಮನೆ ರಾಜ್ಯ ತುಮಕೂರು: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ 24 ಗಂಟೆಯಲ್ಲೇ ಹಿಂದೂ ಧರ್ಮಕ್ಕೆ ಮರಳಿದ ಅರ್ಚಕ

ತುಮಕೂರು: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ 24 ಗಂಟೆಯಲ್ಲೇ ಹಿಂದೂ ಧರ್ಮಕ್ಕೆ ಮರಳಿದ ಅರ್ಚಕ

0

ತುಮಕೂರು (Tumkuru): ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕಯೊಬ್ಬರು ಮತಾಂತರಗೊಂಡ 24 ಗಂಟೆಗಳಲ್ಲೇ ಮರಳಿ ಹಿಂದೂಧರ್ಮಕ್ಕೆ ಮರಳಿ ಬಂದಿದ್ದಾರೆ.

ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯದ ಅರ್ಚಕ ದಿ.ರೇಣುಕಾರಾಧ್ಯ ಎಂಬವರ ಪುತ್ರ ಎಚ್.ಆರ್ ಚಂದ್ರಶೇಖರಯ್ಯ ಉರುಫ್ ಮಂಜಣ್ಣ ಎಂಬವವರು ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು.

ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಬಗ್ಗೆ ಎಚ್.ಆರ್ ಚಂದ್ರಶೇಖರಯ್ಯ ಪತ್ರಿಕಾ ಪ್ರಕಟಣೆ ನೀಡಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಚಂದ್ರಶೇಖರಯ್ಯ ಅವರನ್ನು ಮರಳಿ ಮಾತೃ ಧರ್ಮಕ್ಕೆ ಕರೆತರುವ ಕಾರ್ಯ ಯಶಸ್ವಿಯಾಗಿದೆ.
ಚಂದ್ರಶೇಖರಯ್ಯ ಅವರು ಮತಾಂತರಗೊಂಡ ವಿಷಯ ತಿಳಿಯುತ್ತಲೇ ಮಾಜಿ ಸಚಿವ, ತುಮಕೂರಿನ ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಅವರು ಚಂದ್ರಶೇಖರಯ್ಯ ಅವರನ್ನು ಭೇಟಿಯಾಗಿದ್ದಾರೆ. ಮತಾಂತರ ವೃತ್ತಾಂತದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡ ಅವರು ಚಂದ್ರಶೇಖರಯ್ಯ ಅವರನ್ನು ಮರಳಿ ಮಾತೃ ಧರ್ಮವಾದ ಹಿಂದೂ ಧರ್ಮಕ್ಕೆ ಕರೆತಂದಿದ್ದಾರೆ.
ಸೊಗಡು ಶಿವಣ್ಣ ಅವರ ಈ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.