ತುಮಕೂರು (Tumkuru): ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕಯೊಬ್ಬರು ಮತಾಂತರಗೊಂಡ 24 ಗಂಟೆಗಳಲ್ಲೇ ಮರಳಿ ಹಿಂದೂಧರ್ಮಕ್ಕೆ ಮರಳಿ ಬಂದಿದ್ದಾರೆ.
ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯದ ಅರ್ಚಕ ದಿ.ರೇಣುಕಾರಾಧ್ಯ ಎಂಬವರ ಪುತ್ರ ಎಚ್.ಆರ್ ಚಂದ್ರಶೇಖರಯ್ಯ ಉರುಫ್ ಮಂಜಣ್ಣ ಎಂಬವವರು ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು.
ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಬಗ್ಗೆ ಎಚ್.ಆರ್ ಚಂದ್ರಶೇಖರಯ್ಯ ಪತ್ರಿಕಾ ಪ್ರಕಟಣೆ ನೀಡಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಚಂದ್ರಶೇಖರಯ್ಯ ಅವರನ್ನು ಮರಳಿ ಮಾತೃ ಧರ್ಮಕ್ಕೆ ಕರೆತರುವ ಕಾರ್ಯ ಯಶಸ್ವಿಯಾಗಿದೆ.
ಚಂದ್ರಶೇಖರಯ್ಯ ಅವರು ಮತಾಂತರಗೊಂಡ ವಿಷಯ ತಿಳಿಯುತ್ತಲೇ ಮಾಜಿ ಸಚಿವ, ತುಮಕೂರಿನ ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಅವರು ಚಂದ್ರಶೇಖರಯ್ಯ ಅವರನ್ನು ಭೇಟಿಯಾಗಿದ್ದಾರೆ. ಮತಾಂತರ ವೃತ್ತಾಂತದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡ ಅವರು ಚಂದ್ರಶೇಖರಯ್ಯ ಅವರನ್ನು ಮರಳಿ ಮಾತೃ ಧರ್ಮವಾದ ಹಿಂದೂ ಧರ್ಮಕ್ಕೆ ಕರೆತಂದಿದ್ದಾರೆ.
ಸೊಗಡು ಶಿವಣ್ಣ ಅವರ ಈ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.