ನವದೆಹಲಿ(New Delhi): ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರೆ ತಮ್ಮ ವಿರುದ್ಧದ ಎಲ್ಲ ಪ್ರಕರಣಗಳನ್ನು ಸಮಾಪ್ತಿ ಮಾಡುವುದಾಗಿ ಬಿಜೆಪಿ ಆಫರ್ ನೀಡಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ.
ಎಎಪಿ ಸರ್ಕಾರದ ಹಿಂದಿನ ಅಬಕಾರಿ ನೀತಿ ಕುರಿತಾಗಿ ಸಿಸೋಡಿಯಾ ಅವರನ್ನು ಸಿಬಿಐ ತೀವ್ರ ವಿಚಾರಣೆಗೊಳಪಡಿಸಿರುವ ಬೆನ್ನಲ್ಲೇ ಸಿಸೋಡಿಯಾ ಅವರ ಆರೋಪ ರಾಜಕೀಯವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ.
ಆಪ್ ತೊರೆದು ಬಿಜೆಪಿಗೆ ಬನ್ನಿ ಎಂದು ಬಿಜೆಪಿಯಿಂದ ನನಗೆ ಸಂದೇಶ ಬಂದಿದೆ. ನಿಮ್ಮ ವಿರುದ್ಧದ ಎಲ್ಲ ಸಿಬಿಐ ಮತ್ತು ಇಡಿ ಕೇಸುಗಳನ್ನು ಮುಕ್ತಾಯಗೊಳಿಸುವ ಭರವಸೆ ನೀಡುತ್ತೇವೆ ಎಂದು ಸಂದೇಶ ಬಂದಿದೆ ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
ನಾನೊಬ್ಬ ರಜಪೂತನಾಗಿದ್ದು, ಮಹಾರಾಣಾ ಪ್ರತಾಪ್ ಅವರ ವಂಶಜನಾಗಿದ್ದೇನೆ. ನನ್ನ ತಲೆ ಕತ್ತರಿಸಿದರೂ ಸರಿ, ಭ್ರಷ್ಟರು ಮತ್ತು ಸಂಚುಕೋರರ ಎದುರು ತಲೆ ಬಾಗಿಸಲಾರೆ. ನನ್ನ ವಿರುದ್ಧದ ಎಲ್ಲ ಪ್ರಕರಣಗಳು ಸುಳ್ಳು ಎಂದಿರುವ ಸಿಸೋಡಿಯಾ, ಬಿಜೆಪಿ ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.
ರೂಪಾಯಿ ಮೌಲ್ಯ ಕುಸಿಯುತ್ತಿದೆ, ಜನತೆ ಹಣದುಬ್ಬರದಿಂದ ತೊಂದರೆಗೀಡಾಗಿದ್ದಾರೆ, ನಿರುದ್ಯೋಗ ಹೆಚ್ಚಾಗಿದೆ. ಇದರ ಮಧ್ಯೆ ಈ ಜನ ‘ಸಿಬಿಐ-ಇಡಿ’ ಆಟ ಆಡುತ್ತಿದ್ದಾರೆ ಮತ್ತು ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಉರುಳಿಸುವಲ್ಲಿ ಮತ್ತು ಬರೀ ಟೀಕೆ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.