ಬೆಂಗಳೂರು (Bengaluru): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರರಿಗೆ ಪಾವತಿಸಬೇಕಿದ್ದ ಹಣವನ್ನು ತನ್ನ ಪ್ರೇಯಸಿಯ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದ ಬಿಬಿಎಂಪಿಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಆತನ ಪ್ರೇಯಸಿಯನ್ನು ಅಮೃತ ಹಳ್ಳಿಯ ಪೊಲೀಸರು ಬಂಧಿಸಿದ್ದಾರೆ.
ಥಣಿಸಂದ್ರದ ಪರಿಶಿಷ್ಟ ಕಾಲೊನಿಯ ಎಂ.ಕೆ.ಪ್ರಕಾಶ ಹಾಗೂ ಯಲಹಂಕದ ನ್ಯೂಟೌನ್ನ ಕಾಂಚನಾ ಬಂಧಿತರು.
ಬ್ಯಾಟರಾಯನಪುರದಲ್ಲಿ ಎಸ್ಡಿಎ ಆಗಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಬಿಬಿಎಂಪಿಯ 14.7 ಲಕ್ಷ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದ. ಈ ಬಗ್ಗೆ ಪಾಲಿಕೆ ಎಂಜಿನಿಯರ್ ರಾಜೇಂದ್ರ ನಾಯಕ್ ಅವರು ದೂರು ನೀಡಿದ್ದರು.
2021–22ನೇ ಸಾಲಿನ ಬಿಬಿಎಂಪಿ ಲೆಕ್ಕ ಪರಿಶೋಧನೆಯನ್ನು ಜುಲೈನಲ್ಲಿ ಆರಂಭಿಸಲಾಗಿತ್ತು. ಲೆಕ್ಕ ಪುಸ್ತಕ ಹಾಜರುಪಡಿಸಲು ಲೆಕ್ಕಶಾಖೆಯ ನಿರ್ವಾಹಕ ಎಂ.ಕೆ.ಪ್ರಕಾಶ್ಗೆ ಮೌಖಿಕ ಸೂಚನೆ ನೀಡಲಾಗಿತ್ತು. ಆದರೆ, ಲೆಕ್ಕ ಪುಸ್ತಕ ಹಾಜರುಪಡಿಸದೇ ಅನಧಿಕೃತ ರಜೆ ಮೇಲೆ ತೆರಳಿದ್ದ. ಅನುಮಾನಗೊಂಡು ಕೆನರಾ ಬ್ಯಾಂಕ್ ಪರಿಶೀಲನೆ ನಡೆಸಿದಾಗ ಕಾಂಚನಾ ಎಂಬವರ ಖಾತೆಗೆ ಹಣ ವರ್ಗಾವಣೆ ಮಾಡಿರುವುದು ಕಂಡುಬಂದಿತ್ತು ಎಂದು ಮೂಲಗಳು ತಿಳಿಸಿವೆ.
ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಮೇಲಧಿಕಾರಿ ಸಹಿ ಪಡೆದು ಹಣ ಬಿಡುಗಡೆ ಮಾಡಬೇಕಿತ್ತು. ಆದರೆ, ಆರ್ಟಿಜಿಎಸ್ ಹಾಗೂ ನೆಫ್ಟ್ನ ಕೆಲವು ಹಣಕಾಸಿನ ಚೆಕ್ಗಳನ್ನು ತಿದ್ದಿ ಬ್ಯೂಟಿಷಿಯನ್ ಕಾಂಚನಾ ಹಾಗೂ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದ. ಈ ಹಣವನ್ನು ಇಬ್ಬರೂ ವಿಲಾಸಿ ಜೀವನಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.