ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳು ಜನರಿಗೆ ಉಚಿತ ಕೊಡುಗೆ ನೀಡುವುದರ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಡಿಎಂಕೆ ಪಕ್ಷದ ಪ್ರತಿನಿಧಿಯು ಮಾಧ್ಯಮ ಚರ್ಚೆಯೊಂದರಲ್ಲಿ ನೀಡಿರುವ ಹೇಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.
ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳ ಪ್ರಣಾಳಿಕೆಯನ್ನು ನಿಯಂತ್ರಿಸಲು ಮತ್ತು ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನಕ್ಕೆ ಅವರನ್ನು ಹೊಣೆಗಾರರನ್ನಾಗಿಸಲು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠ ನಡೆಸಿತು.
ಪ್ರಕರಣದ ವಿಚಾರಣೆ ವೇಳೆ ಡಿಎಂಕೆ ಪ್ರತಿನಿಧಿಸಿದ್ದ ಹಿರಿಯ ವಕೀಲ ಪಿ ವಿಲ್ಸನ್ ಅವರು ವಾದ ಮಂಡಿಸಲು ಮುಂದಾದರು. ಆಗ ಸಿಜೆಐ ರಮಣ ಅವರು “ವಿಲ್ಸನ್ ಅವರೇ ನೀವು ಪ್ರತಿನಿಧಿಸುವ ಪಕ್ಷದ (ಡಿಎಂಕೆ) ಕುರಿತು ನನಗೆ ಸಾಕಷ್ಟು ಹೇಳುವುದಿದೆ. ನೀವು ಮಾತ್ರವೇ ಬುದ್ದಿವಂತ ಪಕ್ಷಕಾರರು ಎಂದು ತಿಳಿದುಕೊಳ್ಳಬೇಡಿ. ನಾವು ಏನೂ ಹೇಳುತ್ತಿಲ್ಲ ಎಂದ ಮಾತ್ರಕ್ಕೆ ಏನೆಲ್ಲಾ ಹೇಳಲಾಗುತ್ತಿದೆ ಎಂಬುದರೆಡೆಗೆ ನಾವು ನಿರ್ಲಕ್ಷದಿಂದಿದ್ದೇವೆ ಎಂದು ಭಾವಿಸಬೇಡಿ” ಎಂದರು.
ಈ ಸಂದರ್ಭದಲ್ಲಿ ಹಿರಿಯ ವಕೀಲ ಗೋಪಾಲ ಸುಬ್ರಮಣಿಯಮ್ ಅವರು “ಸುದ್ದಿ ವಾಹಿನಿಯ ಕಾರ್ಯಕ್ರಮದಲ್ಲಿ ತಮಿಳುನಾಡಿನ ಹಣಕಾಸು ಸಚಿವರು ಸುಪ್ರೀಂ ಕೋರ್ಟ್ ಕುರಿತು ನೀಡಿದ ಹೇಳಿಕೆಯು ಸರಿಯಲ್ಲ” ಎಂದರು.
“ಗ್ರಾಮೀಣ ಪ್ರದೇಶದಲ್ಲಿ ಪಶು ಮತ್ತು ಮೇಕೆಗಳು ಬದುಕಿಗೆ ಆಧಾರ. ಹೆಣ್ಣು ಮಕ್ಕಳು ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲಿ ಎಂದು ಅವರಿಗೆ ಕೆಲವು ಕಡೆ ಬೈಸಿಕಲ್ ನೀಡಲಾಗುತ್ತದೆ. ಯಾವುದು ಉಚಿತ ಕೊಡುಗೆ ಮತ್ತು ಯಾವುದು ಕಲ್ಯಾಣ ಕಾರ್ಯಕ್ರಮ ಎಂಬುದನ್ನು ನಾವು ಪರಿಶೀಲಿಸಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಬಡತನದಲ್ಲಿ ಸಿಲುಕಿರುವ ವ್ಯಕ್ತಿಗೆ ಇಂಥ ಕಿಟ್ಗಳು ಅತ್ಯಂತ ಅಗತ್ಯ. ಇದನ್ನೆಲ್ಲಾ ನ್ಯಾಯಾಲಯದ ಕೊಠಡಿಯಲ್ಲಿ ಚರ್ಚಿಸಲಾಗದು. ಅಂಥ ಜನರ ತಿಳಿವಳಿಕೆ ಮತ್ತು ಬುದ್ದಿವಂತಿಕೆಯನ್ನು ನೋಡಿ ಕಲಿಯಬೇಕಿದೆ” ಎಂದು ಸಿಜೆಐ ಹೇಳಿದರು.
ಆರ್ಥಿಕ ನೀತಿಗಳ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಗಳಿಗೆ ಸಾಂವಿಧಾನಿಕ ಆಧಾರವಿಲ್ಲ ಎಂದು ಸುದ್ದಿ ವಾಹಿನಿಯ ಚರ್ಚೆಯೊಂದರಲ್ಲಿ ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತಿಯಾಗರಾಜನ್ ಅವರು ಹೇಳಿದ್ದರು. “ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವುದು ಪ್ರಹಸನವಷ್ಟೆ. ಚುನಾಯಿತ ಪ್ರತಿನಿಧಿಗಳು ಹೇಗೆ ಜನರಿಗೆ ಹಣ ವ್ಯಯಿಸಬೇಕು ಎಂಬುದನ್ನು ನಿರ್ಧರಿಸುವುದು ತನ್ನ ಕೆಲಸ ಎಂದು ಭಾವಿಸಲು ಸುಪ್ರೀಂ ಕೋರ್ಟ್ ಅದ್ಯಾವ ನೂತನ ಸಾಂವಿಧಾನಿಕ ತಿದ್ದುಪಡಿಯನ್ನು ಆಧರಿಸಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು ತಿಯಾಗರಾಜನ್ ಟಿವಿ ಚರ್ಚೆಯೊಂದರ ವೇಳೆ ವ್ಯಂಗ್ಯವಾಡಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.