ಮನೆ ರಾಜಕೀಯ ಇಂದು ದೆಹಲಿಗೆ ತೆರಳುತ್ತಿರುವ ಬಿಎಸ್’ವೈ

ಇಂದು ದೆಹಲಿಗೆ ತೆರಳುತ್ತಿರುವ ಬಿಎಸ್’ವೈ

0

ಬೆಂಗಳೂರು(Bengaluru) : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು  ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ದೆಹಲಿ ಪ್ರವಾಸವನ್ನು ಕೈಗೊಂಡಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯತ್ತ ತೆರಳಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ಮಧ್ಯಾಹ್ನ 2 ಗಂಟೆಗೆ ಪಕ್ಷದ ನಾಯಕರು ಮತ್ತು ಕೇಂದ್ರ ಸಚಿವರ ಜೊತೆಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ತದನಂತರ ಇಂದು ರಾತ್ರಿ ಕರ್ನಾಟಕ ಭವನದಲ್ಲಿಯೇ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ಅವರು ವಾಪಸ್ ಬರುವ ದಿನಾಂಕವನ್ನು ಕಾಯ್ದಿರಿಸಿದ್ದಾರೆ.

ತಮ್ಮ ದೆಹಲಿ ಪ್ರವಾಸದಲ್ಲಿ ಬಿಎಸ್ ವೈ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಗಳು ಇದೆ ಎಂದು ತಿಳಿದು ಬಂದಿದೆ.