ಮನೆ ರಾಜ್ಯ ಸಿದ್ದರಾಮಯ್ಯ ರಾಜಕೀಯ ಅಲೆಮಾರಿ: ವಿ.ಶ್ರೀನಿವಾಸ್ ಪ್ರಸಾದ್ ಲೇವಡಿ

ಸಿದ್ದರಾಮಯ್ಯ ರಾಜಕೀಯ ಅಲೆಮಾರಿ: ವಿ.ಶ್ರೀನಿವಾಸ್ ಪ್ರಸಾದ್ ಲೇವಡಿ

0

ಚಾಮರಾಜನಗರ(Chamarajanagara): ಸಿದ್ದರಾಮಯ್ಯ ರಾಜಕೀಯ ಅಲೆಮಾರಿಯಾಗಿ ಕ್ಷೇತ್ರ ಹುಡುಕಾಡುತ್ತಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಲೇವಡಿ ಮಾಡಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 8 ಲಕ್ಷ ಮಂದಿ ಸೇರಿಸಿ ಸಿದ್ದರಾಮೋತ್ಸವ ಮಾಡಿದ ಮೇಲೂ ಕ್ಷೇತ್ರ ಸಿಗದೇ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಅಲೆಮಾರಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಅವರನ್ನು ನೋಡಿದ್ರೆ ನನಗೆ ನಗು ಬರುತ್ತದೆ. ದಾವಣಗೆರೆಯಲ್ಲಿ 6-8 ಲಕ್ಷ ಜನ ಸೇರಿಸಿ ಮೈಸೂರು ಪಾಕ್ ತಿಂದ್ರಿ ಆದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಧೈರ್ಯ ಬಂದಿದ್ಯಾ?, ಅವರು ತಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಲಿ ಎಂದು ಸವಾಲು ಹಾಕಿದರು.

ಕೆಲಸ ಮಾಡಿ, ಇಲ್ಲವೇ ನಡೀರಿ ಎಂಬ ಕಾಂಗ್ರೆಸ್ ಘೋಷಣೆಗೆ ಪ್ರತಿಕ್ರಿಯಿಸಿದ ಪ್ರಸಾದ್​, ಯಾರು ಆಡಳಿತ ನಡೆಸಬೇಕು ಎಂದು ತೀರ್ಮಾನ ಮಾಡಬೇಕಾದವರು ಜನ. ಕಾಂಗ್ರೆಸ್​ನವರು ಅವರ ಬಂಡವಾಳ ಅರಿತು ಮಾತನಾಡಲಿ, 28 ಲೋಕಸಭಾ ಕ್ಷೇತ್ರದಲ್ಲಿ ಯಾಕೆ ಅವರು ಒಂದು ಸ್ಥಾನ ಗೆದ್ದರು, ಆಡಳಿತದಲ್ಲಿದ್ದವರನ್ನು ಯಾಕೆ ವಿಪಕ್ಷದಲ್ಲಿ ಕೂರಿಸಿದರು, ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಗೆ ಬಂದಿದೆ, ಅವಲೋಕಿಸಿ ಮಾತನಾಡಿ ಎಂದು ಹರಿಹಾಯ್ದರು.