ಬೆಂಗಳೂರು (Bengaluru): ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 11 ರನ್ ಅಂತರದಲ್ಲಿ ಜಯಗಳಿಸಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡ 2022ರ ಮಹಾರಾಜ ಟ್ರೋಫಿ ಮುಡಿಗೇರಿಸಿಕೊಂಡಿತು.
ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ 25 ಲಕ್ಷ ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ.
ಗುಲ್ಬರ್ಗ ಮಿಸ್ಟಿಕ್ಸ್ ನೀಡಿದ್ದ 221 ರನ್ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ತಂಡ ಚೇತನ್ ಎಲ್.ಆರ್. (91) ಹಾಗೂ ಕ್ರಾಂತಿ ಕುಮಾರ್ (47) ಅವರ 116 ರನ್ ಜೊತೆಯಾಟದಿಂದ ಗೆಲ್ಲುವ ಆತ್ಮವಿಶ್ವಾಸ ಹೊಂದಿತ್ತು.
ಆದರೆ ಮನೋಜ್ ಭಾಂಡಗೆ(32ಕ್ಕೆ 3) ಬೆಂಗಳೂರಿನ ಕನಸನ್ನು ನುಚ್ಚುನೂರು ಮಾಡಿದರು. ಅಂತಿಮವಾಗಿ ಬೆಂಗಳೂರು 9 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಆ ಮೂಲಕ ಲೀಗ್ ಹಂತದಲ್ಲಿ ಪ್ರಾಬಲ್ಯ ಸಾಧಿಸಿದ್ದ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ರನ್ನರ್ ಅಪ್ಗೆ ತೃಪ್ತಿಪಟ್ಟುಕೊಂಡಿತು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ್ದ ದೇವದತ್ತ ಪಡಿಕ್ಕಲ್ (56*) ಹಾಗೂ ನಾಯಕ ಮನೀಶ್ ಪಾಂಡೆ (41*) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್ ತಂಡ 220 ರನ್ ಗಳಿಸಿ ಎದುರಾಳಿ ಬೆಂಗಳೂರು ಬ್ಲಾಸ್ಟರ್ಸ್ಗೆ 221 ರನ್ಗಳ ಬೃಹತ್ ಗುರಿಯನ್ನು ನೀಡಿತ್ತು.
ರೋಹನ್ ಪಾಟೀಲ್ (38) ಹಾಗೂ ಜೆಸ್ವತ್ ಆಚಾರ್ಯ (39) 60 ರನ್ಗಳ ಜೊತೆಯಾಟವಾಡಿ ಬೃಹತ್ ಮೊತ್ತಕ್ಕೆ ವೇದಿಕೆ ಹಾಕಿಕೊಟ್ಟರು. ಟೂರ್ನಿಯಲ್ಲಿ ಇದುವರೆಗೂ ಎರಡು ಶತಕ ದಾಖಲಿಸಿರುವ ರೋಹನ್ ಪಾಟೀಲ್ ಅಬ್ಬರದ ಆರಂಭ ನೀಡಿದರು. 21 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿ ಅಮೂಲ್ಯ 38 ರನ್ ಗಳಿಸಿ ನಿರ್ಗಮಿಸಿದರು. ಜೆಸ್ವತ್ ಆಚಾರ್ಯ 3 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 39 ರನ್ ಸಿಡಿಸಿ ಬೃಹತ್ ಮೊತ್ತಕ್ಕೆ ಮುನ್ನುಡಿ ಬರೆದರು.
ಎರಡನೇ ಕ್ವಾಲಿಫಯರ್ನಲ್ಲಿ 96 ರನ್ ಸಿಡಿಸಿ ಜಯದ ರೂವಾರಿ ಎನಿಸಿದ್ದ ದೇವದತ್ತ ಪಡಿಕ್ಕಲ್ ಆರಂಭದಲ್ಲಿ ನಿಧಾನಗತಿಯಲ್ಲಿ ಇನ್ನಿಂಗ್ಸ್ ಆರಂಭಿಸಿದರೂ ನಂತರ ಅಬ್ಬರದ ಹೊಡೆಗಳಿಗೆ ಮನ ಮಾಡಿ 42 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 56 ರನ್ ಗಳಿಸಿ ಬೃಹತ್ ಮೊತ್ತಕ್ಕೆ ನೆರವಾದರು.
ನಾಯಕ ಮನೀಶ್ ಪಾಂಡೆ ಕೇವಲ 17 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 41 ರನ್ ಸಿಡಿಸಿ ನಾಯಕನ ಜವಾಬ್ದಾರಿಯ ಆಟವಾಡಿದರು. ಪಡಿಕ್ಕಲ್ ಹಾಗೂ ಪಾಂಡೆ 62 ರನ್ ಜೊತೆಯಾಟವಾಡಿ ಅಸಾಧಾರಣ ಮೊತ್ತವನ್ನು ದಾಖಲಿಸಿದರು. ಇದಕ್ಕೂ ಮುನ್ನ ಯುವ ಆಟಗಾರ ಕೃಷ್ಣನ್ ಶ್ರೀಜಿತ್ 25 ಎಸತೆಗಳಲ್ಲಿ 38 ರನ್ ಗಳಿಸಿ ತಂಡದ ಪರ ಜವಾಬ್ದಾರಿಯುತ ಆಟವಾಡಿದರು.
ಬೆಂಗಳೂರು ಬ್ಲಾಸ್ಟರ್ಸ್ ಪರ ಅನಿರುಧ್ ಜೋಶಿ 3 ಓವರ್ಗಳಲ್ಲಿ ಕೇವಲ 15 ರನ್ ನೀಡಿ 1 ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್ ಎನಿಸಿದರು.
ಸಂಕ್ಷಿಪ್ತ ಸ್ಕೋರ್:
ಗುಲ್ಬರ್ಗ ಮಿಸ್ಟಿಕ್ಸ್: 20 ಓವರ್ಗಳಲ್ಲಿ 3 ವಿಕೆಟ್ಗೆ 220 ( ರೋಹನ್ ಪಾಟೀಲ್ 38, ಜೆಸ್ವತ್ ಆಚಾರ್ಯ 39, ಕೃಷ್ಣನ್ ಶ್ರೀಜಿತ್ 38, ದೇವದತ್ತ ಪಡಿಕ್ಕಲ್ 56*, ಮನೀಶ್ ಪಾಂಡೆ 41*; ಪ್ರದೀಪ್ 51ಕ್ಕೆ 1, ರಿಶಿ ಬೋಪಣ್ಣ 35ಕ್ಕೆ 1, ಅನಿರುಧ್ ಜೋಶಿ 15ಕ್ಕೆ 1)
ಬೆಂಗಳೂರು ಬ್ಲಾಸ್ಟರ್ಸ್: 20 ಓವರ್ಗಳಲ್ಲಿ 9 ವಿಕೆಟ್ಗೆ 209 (ಎಲ್.ಆರ್. ಚೇತನ್ 91, ಕ್ರಾಂತಿ ಕುಮಾರ್ 47, ರಿತೇಶ್ ಭಟ್ಕಳ್ 20ಕ್ಕೆ 2, ಪ್ರಣವ್ ಭಾಟಿಯಾ 39ಕ್ಕೆ 2, ಮನೋಜ್ ಭಾಂಡಗೆ 32ಕ್ಕೆ 3)
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.