ಸುಳ್ಯ(ದಕ್ಷಿಣ ಕನ್ನಡ): ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿಯ ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆಯೊಂದು ಪತ್ತೆಯಾಗಿದ್ದು, ಗುಹೆಯೊಳಗೆ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿವೆ.
ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ರಬ್ಬರ್ ತೋಟ ತೆರವು ಮಾಡಿ ಅಡಕೆ ತೋಟ ಮಾಡುವ ಉದ್ದೇಶದಿಂದ ಜೆಸಿಬಿ ಯಂತ್ರದ ಮೂಲಕ ಅಡಕೆ ಗುಂಡಿ ತೆಗೆಯುವಾಗ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ.
ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲವಾದ ಭಾಗ ಗೋಚರಿಸಿದ್ದು ಇಲ್ಲಿ ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷವಾಗಿ ಗಮನಿಸಿದಾಗ ಇದರೊಳಗಡೆ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿದೆ. ವಿಶೇಷ ರೀತಿಯ ಗುಹೆಯಲ್ಲಿ ಎರಡು ಅಂತರದ ಕೋಣೆಗಳಿರುವಂತೆ ಕಂಡು ಬಂದಿದೆ.
ಉಡುಪಿಯ ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್, ಪ್ರಾಚ್ಯವಸ್ತು ಸಂಶೋಧಕ ಪ್ರೊ.ಟಿ.ಮುರುಗೇಶಿ ಅವರು ಸ್ಥಳಕ್ಕೆ ಆಗಮಿಸಿ ಪರಿಕರಗಳನ್ನು ಸಂಗ್ರಹಿಸಿ, ಅಧ್ಯಯನ ನಡೆಸುತ್ತಿದ್ದಾರೆ.
ಈಗಾಗಲೇ ಈ ಪ್ರಾಚೀನ ಪರಿಕರಗಳನ್ನು ತೊಳೆದು ಸ್ವಚ್ಚಗೊಳಿಸಿದ್ದೇವೆ ಮುಂದಿನ ದಿನಗಳಲ್ಲಿ ಇದರ ಹಿನ್ನೆಲೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.