ನವದೆಹಲಿ(New delhi): ಸುಪ್ರೀಂಕೋರ್ಟ್ ನೂತನ ಮುಖ್ಯ ನಾಯಮೂರ್ತಿಗಳಾಗಿ ನಿಯೋಜಿತರಾಗಿದ್ದ ಉದಯ್ ಉಮೇಶ್ ಲಲಿತ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿಂದು ಲಲಿತ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.
ಯು.ಯು. ಲಿಲಿತ್ ಅವರು 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದು, ಯುಯು ಲಲಿತ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ 74 ದಿನಗಳ ಕಾಲ ಕೆಲಸ ನಿರ್ವಹಿಸಲಿದ್ದಾರೆ.
ಇದಕ್ಕೂ ಮೊದಲು ಅವರು ನಿರ್ಗಮಿತ ಸಿಜೆಐ ಎನ್.ವಿ. ರಮಣ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಸುಪ್ರೀಂಕೋರ್ಟ್ ಮುಂದಿರುವ ಪ್ರಕರಣಗಳನ್ನು ಪಟ್ಟಿ ಮಾಡುವುದು ಮತ್ತು ತುರ್ತು ವಿಷಯಗಳನ್ನು ಕೈಗೆತ್ತಿಕೊಂಡು ಪರಿಹರಿಸುವುದು ನನ್ನ ಮೊದಲ ಆದ್ಯತೆಯಾಗಲಿದೆ ಎಂದು ತಿಳಿಸಿದರು.
ಸ್ಪಷ್ಟತೆಯೊಂದಿಗೆ ಕಾನೂನನ್ನು ರೂಪಿಸುವುದು ಮತ್ತು ಅದನ್ನು ಜಾರಿ ಮಾಡುವುದನ್ನು ನಾನು ನಂಬಿದ್ದೇನೆ. ಇದನ್ನು ಸಾಕಾರ ಮಾಡಲು ವಿಸ್ತೃತ ಪೀಠಗಳನ್ನು ರಚಿಸಬೇಕು. ಇದರಿಂದ ಸಮಸ್ಯೆಗಳು ತಕ್ಷಣವೇ ಪರಿಹಾರ ಕಾಣಲಿವೆ ಎಂದು ಅವರು ತಿಳಿಸಿದರು.
ಗಂಭೀರ ಕೇಸ್ಗಳನ್ನು ವ್ಯವಹರಿಸಲು ಯಾವಾಗಲೂ ಕನಿಷ್ಠ ಒಂದು ಸಾಂವಿಧಾನಿಕ ಪೀಠವನ್ನು ವರ್ಷವಿಡೀ ಕಾರ್ಯನಿರ್ವಹಿಸುಂತೆ ಮಾಡಲು ಶ್ರಮಿಸಲಾಗುವುದು ಎಂದೂ ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.