ಪಣಜಿ(Panaji): ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಗೋವಾದ ರೆಸ್ಟೊರೆಂಟ್ ಒಂದರ ಮಾಲೀಕ ಮತ್ತು ಕೊಲೆ ಆರೋಪಿಗಳಿಗೆ ಮಾದಕ ವಸ್ತುಗಳನ್ನು ಒದಗಿಸುತ್ತಿದ್ದ ಆರೋಪ ಹೊತ್ತ ಶಂಕಿತನನ್ನು ಬಂಧಿಸಲಾಗಿದೆ
ಕೊಲೆ ಆರೋಪ ಹೊತ್ತಿರುವ ಸೋನಾಲಿ ಅವರ ಇಬ್ಬರು ಆಪ್ತರು ತನಿಖೆ ವೇಳೆ ನೀಡಿರುವ ಮಾಹಿತಿಯನ್ನು ಆಧರಿಸಿ ಬಂಧಿಸಲಾಗಿದೆ.
ಶಂಕಿತ ಡ್ರಗ್ ಸಾಗಣೆದಾರ ದತ್ತಪ್ರಸಾದ್ ಗಾಂವ್ಕರ್ನನ್ನು ಅಂಜುನಾ ಪ್ರದೇಶದಲ್ಲಿ ಬಂಧಿಸಲಾಗಿದೆ. ಈತನಿಂದ ಡ್ರಗ್ ತೆಗೆದುಕೊಳ್ಳುತ್ತಿದ್ದೆವು ಎಂದು ಬಂಧಿತ ಕೊಲೆ ಆರೋಪಿಗಳು ಬಾಯ್ಬಿಟ್ಟ ಬೆನ್ನಲ್ಲೇ ಗೋವಾ ಪೊಲೀಸರು ದತ್ತಪ್ರಸಾದ್ನನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.
ಸೋನಾಲಿ ಅವರು ಮೃತಪಡುವ ಮುನ್ನ ಆಗಸ್ಟ್ 22ರಂದು ತಡರಾತ್ರಿ ವರೆಗೆ ಪಾರ್ಟಿ ಮಾಡಿದ ಕರ್ಲೀಸ್ ರೆಸ್ಟೊರೆಂಟ್ನ ಮಾಲೀಕನನ್ನು ವಶಕ್ಕೆ ಪಡೆಯಲಾಗಿದೆ.
ಸೋನಾಲಿ ಅವರ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣವಿರಬಹುದು ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ವಿವರಿಸಿದ್ದಾರೆ.
ಫೋಗಾಟ್ ಅವರ ಆಪ್ತರಾದ ಸುಧೀರ್ ಸಂಗ್ವಾನ್ ಮತ್ತು ಸುಖ್ವಿಂದರ್ ಸಿಂಗ್ ಕುಡಿಯುವ ನೀರಿನ ಬಾಟಲಿಯಲ್ಲಿ ಉದ್ದೇಶಪೂರ್ವಕವಾಗಿ ವಿಷದ ದ್ರವ ಬೆರೆಸಿ, ಅದನ್ನು ಆಕೆಗೆ ಕುಡಿಸಿ ಕೊಂದಿದ್ದಾರೆ. ಕೊಲೆ ಮಾಡಿರುವುದನ್ನು ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.