ಮನೆ ರಾಜ್ಯ ಕೊಪ್ಪಳದಲ್ಲಿ ಬೋನಿಗೆ ಬಿದ್ದ ಚಿರತೆ

ಕೊಪ್ಪಳದಲ್ಲಿ ಬೋನಿಗೆ ಬಿದ್ದ ಚಿರತೆ

0

ಕೊಪ್ಪಳ (Koppala): ಕುಕನೂರು ತಾಲ್ಲೂಕಿನ ಗಾವರಾಳ ಗ್ರಾಮದ ಹೊರವಲಯದಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸಮೇತ ಬೋನನ್ನು ಸುರಕ್ಷಿತ ಪ್ರದೇಶಕ್ಕೆ ಕೊಂಡೊಯ್ದರು. ಮೊತ್ತೊಂದು ಚಿರತೆ ಇರುವ ಶಂಕೆ ಇರುವುದರಿಂದ ಮತ್ತೊಂದು ಬೋನು ಇಡಲಾಗಿದೆ.

ಕಳೆದ 15 ದಿನಗಳಿಂದ ಚಿರತೆ ಆಗಾಗ ಕಾಣಿಸಿಕೊಂಡು ಒಂದು ನಾಯಿಯನ್ನು ಕೊಂದು, ಮತ್ತೊಂದು ಸಾಕು ನಾಯಿಯನ್ನು ಗಾಯಗೊಳಿಸಿತ್ತು. ಒಮ್ಮೆ ಸಾರ್ವಜನಿಕರಿಗೆ ಕಾಣಿಸಿಕೊಂಡು ಮತ್ತಷ್ಟು ಆತಂಕ ಮೂಡಿಸಿತ್ತು. ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಚಿರತೆಯನ್ನು ಸುರಕ್ಷಿತ ಪ್ರದೇಶದಲ್ಲಿ ಬಿಡಲಾಗುವುದು. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿ ಅಂದಪ್ಪ ಕುರಿ ಹೇಳಿದರು.