ಮನೆ ದೇಶ ಕೋವಿಡ್‌ ಚೇತರಿಕೆಯ ಬಳಿಕ ಭಾರತ ತಂಡ ಸೇರಲಿರುವ ಕೋಚ್‌ ರಾಹುಲ್‌ ದ್ರಾವಿಡ್

ಕೋವಿಡ್‌ ಚೇತರಿಕೆಯ ಬಳಿಕ ಭಾರತ ತಂಡ ಸೇರಲಿರುವ ಕೋಚ್‌ ರಾಹುಲ್‌ ದ್ರಾವಿಡ್

0

ದುಬೈ (Dubai): ಕೋವಿಡ್‌ನಿಂದ ಚೇತರಿಸಿಕೊಂಡಿರುವ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡವನ್ನು ಸೇರಲು ಸಜ್ಜಾಗಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ದ್ರಾವಿಡ್ ತಂಡವನ್ನು ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 23ರಂದು ನಡೆಸಿದ್ದ ಕೋವಿಡ್ ಪರೀಕ್ಷೆಯಲ್ಲಿ ರಾಹುಲ್ ದ್ರಾವಿಡ್ ಅವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಅಲ್ಲದೆ ತಂಡದ ಜೊತೆಗೆ ದುಬೈಗೆ ಪ್ರಯಾಣ ಬೆಳೆಸಿರಲಿಲ್ಲ. ಈಗ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ದ್ರಾವಿಡ್ ಅವರ ಪರೀಕ್ಷಾ ವರದಿಯು ನೆಗೆಟಿವ್ ಬಂದಿದ್ದು, ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.‌