ಸುಳ್ಯ(Sullya): ಸಂಪಾಜೆ ಭಾಗದಲ್ಲಿ ಸೋಮವಾರ ಮತ್ತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಾರ್ಪಡ್ಕ ಊರುಬೈಲು ಸೇತುವೆಯ ಎರಡೂ ಬದಿ ಕುಸಿತವಾಗಿದೆ.
ಕೊಡಗಿನ ಗಡಿ ಭಾಗದಲ್ಲಿ ಸುರಿದ ಭಾರಿ ಮಳೆಗೆ ಕೊಯನಾಡು, ಚೆಂಬು ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು , ಅಪಾರ ಹಾನಿ ಸಂಭವಿಸಿದೆ.
ಕೊಯನಾಡಿನಲ್ಲಿ ಕಿಂಡಿ ಅಣೆಕಟ್ಟಿಗೆ ಬೃಹತ್ ಗಾತ್ರದ ಮರದ ದಿಮ್ಮಿಗಳು ಬಂದು ಅಡ್ಡಲಾಗಿ ನಿಂತಿದ್ದು, ಈ ಪರಿಸರದ ಹಲವು ಮನೆಗಳು ಜಲಾವೃತಗೊಂಡಿದೆ.
ಚೆಂಬು ಗ್ರಾಮದ ಆನೆಹಳ್ಳ ಎಂಬಲ್ಲಿ ಕಿಂಡಿ ಅಣೆಕಟ್ಟು ನೀರಿನಲ್ಲಿ ಕೊಚ್ಚಿಹೋಗಿದ್ದು , ದಬ್ಬಡ್ಕದಲ್ಲೂ ಗುಡ್ಡ ಕುಸಿದಿದ್ದು, ಸಮೀಪದ ರವಿ ಎಂಬವರ ಮನೆಗೆ ಹಾನಿ ಸಂಭವಿಸಿದೆ.
ಇತ್ತೀಚಿಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದ ಮಾರ್ಪಡ್ಕ – ಊರುಬೈಲು ಸೇತುವೆಯ ಎರಡೂ ಬದಿ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಈ ಪರಿಸರದ ಹಲವು ಕೃಷಿಕರ ಅಡಿಕೆ ತೋಟಗಳು ನೀರಿನಿಂದ ಆವೃತಗೊಂಡಿದೆ.














