ಬೆಂಗಳೂರು(Bengaluru): ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ಎಂದು ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತೇವೆ ಎಂದಿದ್ದ ₹4,500 ಕೋಟಿ ಹಣ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿ ಸರ್ಕಾರ ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನೇ ನಿರ್ಮಾಣ ಮಾಡಿತ್ತು. ಬಿಜೆಪಿ ಪ್ರಣಾಳಿಕೆಯಲ್ಲಿ ಶೇ. 90 ರಷ್ಟು ಇದ್ದಿದ್ದು ಬರೀ ಸುಳ್ಳು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇಡದ ಸಂಗತಿಗಳನ್ನು ಮುನ್ನಲೆಗೆ ತಂದು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
2018ರಲ್ಲಿ ನೀಡಿದ ಪ್ರಣಾಳಿಕೆಯಲ್ಲಿ ಒಂದಾದರೂ ನಿಜವಾಗಿಸಿದ್ದೀರಾ. ನಾಡು-ನುಡಿಗಾಗಿ ಬಿಜೆಪಿ ಕೊಡುಗೆ ಶೂನ್ಯ. ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿಯಾಗಿದೆ. ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಇನ್ಮುಂದೆ ನಾವು ನಿರಂತರವಾಗಿ ಪ್ರಶ್ನೆ ಕೇಳುತ್ತೇವೆ. ನೈತಿಕತೆ ಇದ್ದರೆ ಉತ್ತರಿಸಿ ಎಂದು ಟ್ವೀಟಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.