ಮನೆ ರಾಜ್ಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಇಂದೇ ಅಂತಿಮ ತೀರ್ಮಾನ: ಸಚಿವ ಆರ್.ಅಶೋಕ್‌

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಇಂದೇ ಅಂತಿಮ ತೀರ್ಮಾನ: ಸಚಿವ ಆರ್.ಅಶೋಕ್‌

0

ಬೆಂಗಳೂರು (Bengaluru): ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಇಂದೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್‌ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಕೋರಿ ಐದು ಅರ್ಜಿಗಳು ಸಲ್ಲಿಕೆಯಾಗಿದ್ದವು. ಮೂರು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಎರಡು ಅರ್ಜಿಗಳು ಬಾಕಿ ಇವೆ. ಮಂಗಳವಾರ ರಾತ್ರಿಯೊಳಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ಸ್ಥಳೀಯ ನಾಯಕರ ಜತೆಗೂ ಚರ್ಚಿಸಿದ್ದೇವೆ. ಪರ– ವಿರೋಧ ಎರಡೂ ರೀತಿಯ ಅಭಿಪ್ರಾಯಗಳು ಬಂದಿವೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಬೇಕೋ? ಬೇಡವೋ ಎಂಬುದನ್ನು ನಿರ್ಧರಿಸುತ್ತವೆ ಎಂದರು.

ಈದ್ಗಾ ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗಿದೆ. ಯಾವ ಸಮುದಾಯವೂ ಅದನ್ನು ವಿರೋಧಿಸಿಲ್ಲ. ಸ್ವಾತಂತ್ರ್ಯ ದಿನಾಚರಣೆಯ ಮಾದರಿಯಲ್ಲೇ ಈ ವಿಚಾರದಲ್ಲೂ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.