ನೆಲ್ಲಿಕಾಯಿಯಲ್ಲಿ ಅಪಾರ ಆರೋಗ್ಯ ಗುಣಗಳಿವೆ. ಅಪಾರ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವಿರುವ ನೆಲ್ಲಿಕಾಯಿ ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ. ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಡುವ ನೆಲ್ಲಿಕಾಯಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.
ಬೆಟ್ಟದ ನೆಲ್ಲಿಕಾಯಿಯ ಪ್ರಯೋಜನಗಳು
ವಿಟಮಿನ್ ‘ ಸಿ ‘ ಅಂಶ ಯಥೇಚ್ಛವಾಗಿ ಕಂಡು ಬರುವ ಈ ಪುಟ್ಟ ನೆಲ್ಲಿಕಾಯಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಅನೇಕ ರೀತಿಯ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬಹಳ ಹಿಂದಿನ ಕಾಲದಲ್ಲಿಯೂ ಕೂಡ ಅಷ್ಟೇ, ನಮ್ಮ ಆರೋಗ್ಯಕ್ಕೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಒದಗಿಸಿ ಕೊಡುವಲ್ಲಿ ಬೆಟ್ಟದ ನೆಲ್ಲಿಕಾಯಿ ಪಾತ್ರವನ್ನು ಮರೆಯುವಂತಿಲ್ಲ. ಉದಾಹರಣೆಗೆ ನೋಡುವುದಾದರೆ, ಎರಡು ಟೀ ಚಮಚ ಬೆಟ್ಟದ ನೆಲ್ಲಿಕಾಯಿ ಜ್ಯೂಸ್ ಅಷ್ಟೇ ಪ್ರಮಾಣದ ಹಸಿ ಜೇನು ತುಪ್ಪವನ್ನು ಮಿಕ್ಸ್ ಮಾಡಿ ಕುಡಿದರೆ, ಶೀತ, ಕೆಮ್ಮು, ಜ್ವರ, ನೆಗಡಿ ಇತ್ಯಾದಿ ಸಮಸ್ಯೆಗಳು ಬಹಳ ಬೇಗನೇ ನಿವಾರಣೆ ಆಗುತ್ತದೆ. ಅಷ್ಟೇ ದೀರ್ಘಕಾಲದ ಕಾಯಿಲೆಗಳಾದ ಅಜೀರ್ಣ ಮಲಬದ್ಧತೆಯಿಂದ ಹಿಡಿದು ಮಧುಮೇಹ, ರಕ್ತದ ಒತ್ತಡದಂತಹ ಸಮಸ್ಯೆಗಳನ್ನು ದೂರ ಮಾಡುವಲ್ಲಿ ಬೆಟ್ಟದ ನೆಲ್ಲಿಕಾಯಿ ಉಪಯೋಗಕ್ಕೆ ಬರುತ್ತದೆ.
ನೆಲ್ಲಿಕಾಯಿಯಲ್ಲಿ ವಿಟಮಿನ್ ‘ ಸಿ ‘ ಮತ್ತು ಇನ್ನಿತರ ಪೋಷಕಾಂಶಗಳು ಯಥೇಚ್ಛ ವಾಗಿರುವುದರಿಂದ, ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕರುಳಿನ ಸೂಕ್ಷ್ಮಜೀವಿಗಳನ್ನು ಬಲಪಡಿಸುತ್ತವೆ. ಅಷ್ಟೇ ಅಲ್ಲದೆ ದೇಹದಲ್ಲಿನ ಸಕ್ಕರೆ ಅಂಶದ ಮಟ್ಟವನ್ನು ಸಮತೋಲನ ಗೊಳಿಸಿ ಇನ್ಸುಲಿನ್ ಪ್ರತಿರೋಧಕ್ಕೆ ಸಹಾಯ ಮಾಡುತ್ತದೆ.
ಸಾಮಾನ್ಯವಾಗಿ ನೆಲ್ಲಿಕಾಯಿಯು ತುಂಬಾನೇ ಕಹಿ ಹಾಗೂ ಹುಳಿಯಾದ ಅನುಭವವನ್ನು ನೀಡುವುದರಿಂದ ಕೆಲವರಿಗೆ ಇದು ಇಷ್ಟವಾದರೆ, ಇನ್ನು ಕೆಲವರು ಇಷ್ಟಪಡದೆ ಇರಬಹುದು. ಹೀಗಾಗಿ ಇದರ ಜ್ಯೂಸ್ ಮಾಡಿ ಕುಡಿದರೂ ಕೂಡ ಆರೋಗ್ಯಕಾರಿ ಪ್ರಯೋಜನಗಳನ್ನು ಪಡೆಯಬಹುದು.
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಗೆ ನೆಲ್ಲಿಕಾಯಿಯ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿ ಕೊಂಡರೆ ಒಳ್ಳೆಯದು. ಒಂದು ಲೋಟ ನೀರಿಗೆ ಸುಮಾರು 20 ರಿಂದ 30 ಎಂಎಲ್ ನೆಲ್ಲಿಕಾಯಿ ರಸವನ್ನು ಮಿಶ್ರಣ ಮಾಡಿ ಸೇವನೆ ಮಾಡಿ. ಬೇಕೆಂದರೆ ಸ್ವಲ್ಪ ನಿಂಬೆ ಹಣ್ಣಿನ ರಸ ಮತ್ತು ಜೇನು ತುಪ್ಪವನ್ನು ಬೆರೆಸಿ ಸೇವನೆ ಮಾಡಬಹುದು. ಆದರೆ ಯಾವುದಕ್ಕೂ ಒಮ್ಮೆ ಈ ಮನೆಮದ್ದನ್ನು ಅನುಸರಿಸುವ ಮೊದಲು ನಿಮ್ಮ ವೈದ್ಯರ ಸಲಹೆಯನ್ನು ಪಡೆದುಕೊಂಡರೆ ಒಳ್ಳೆಯದು.
ಮಾರ್ಕೆಟ್ ನಲ್ಲಿ ನೆಲ್ಲಿಕಾಯಿ ಸಿಗದೇ ಇರುವವರು, ಆಯುರ್ವೇದ ಅಂಗಡಿಯಿಂದ ನೆಲ್ಲಿಕಾಯಿ ಯ ಪುಡಿ ಖರೀದಿಸಿ, ಇದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬಹುದು. ಇದನ್ನು ನೀರಿನಲ್ಲಿ ಮಿಶ್ರ ಮಾಡಿ ಕುಡಿಯ ಬಹುದು. ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗಿ, ಮಧುಮೇಹ ನಿಯಂತ್ರಣಕ್ಕೆ ಸಿಗದೇ ಇರುವವರು, ಈ ಮನೆಮದ್ದನ್ನು ಅನುಸರಿಸುವ ಮೊದಲು ವೈದ್ಯರ ಸಲಹೆಗಳನ್ನು ಪಡೆದುಕೊಳ್ಳುವುದನ್ನು ಮರೆಯಬೇಡಿ.
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
ಬೀಜಗಳಿಂದ ತಯಾರಾದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ
ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಅಧಿಕಾರಿ ಶ್ರೇಣಿ ಹುದ್ದೆಗಳ ಭರ್ತಿ
ಪ್ಲಾಸ್ಟಿಕ್ ಬಾಟಲ್ ಗಳಿಂದ ಆರೋಗ್ಯಕ್ಕೆ ಮಾರಕ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.