ಚಿತ್ರದುರ್ಗ(Chitradurga): ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತರಾಗಿ ಹೃದ್ರೋಗ ಸಮಸ್ಯೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶೆ ಬಿ.ಕೆ.ಕೋಮಲಾ ಸೂಚಿಸಿದ್ದಾರೆ.
ಅಸ್ವಸ್ಥತರಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಸೂಚನೆ ನೀಡಿದರು.
ಪ್ರಕರಣದಲ್ಲಿ ಗುರುವಾರ ರಾತ್ರಿ ಬಂಧಿತರಾಗಿರುವ ಶರಣರು ಅನಾರೋಗ್ಯದ ಕಾರಣಕ್ಕೆ ಶುಕ್ರವಾರ ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಹೃದ್ರೋಗ ಸಮಸ್ಯೆ ಇರುವುದು ಖಚಿತವಾದ ಬಳಿಕ ದಾವಣಗೆರೆಯ ತಜ್ಞ ವೈದ್ಯರು ಜಿಲ್ಲಾ ಆಸ್ಪತ್ರೆಗೆ ಧಾವಿಸಿ ಹೃದಯ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇದೆ ಎಂಬ ಬಗ್ಗೆ ವರದಿ ನೀಡಿದ್ದರು.
ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಅನುಮತಿ ಕೋರಿ ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಅಕ್ಕಮಹಾದೇವಿ ಅವರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.
ಮಧ್ಯಾಹ್ನ 2.45 ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಾಯಿತು. ಆರೋಗ್ಯದ ಸಮಸ್ಯೆಗೆ ಸಂಬಂಧಿಸಿದಂತೆ ವೈದ್ಯರು ನೀಡಿದ ದಾಖಲೆಗಳನ್ನು ಅರ್ಜಿದಾರರು ಹಾಜರುಪಡಿಸಲು ವಿಫಲರಾದರು.
ಇದರಿಂದ ಅನುಮಾನಗೊಂಡ ನ್ಯಾಯಾಧೀಶರು ಆರೋಪಿ ಸ್ಥಾನದಲ್ಲಿ ಇರುವ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.