ಮನೆ ರಾಜಕೀಯ ಡಬಲ್ ಇಂಜಿನ್ ಸರ್ಕಾರ ದೇಶದ ಅಭಿವೃದ್ಧಿಗೆ ಕಾರಣ: ಸಿಎಂ ಬೊಮ್ಮಾಯಿ

ಡಬಲ್ ಇಂಜಿನ್ ಸರ್ಕಾರ ದೇಶದ ಅಭಿವೃದ್ಧಿಗೆ ಕಾರಣ: ಸಿಎಂ ಬೊಮ್ಮಾಯಿ

0

ಮಂಗಳೂರು(Mangalore): ಡಬಲ್ ಇಂಜಿನ್ ಸರ್ಕಾರ ಕರ್ನಾಟಕದ ಜತೆಗೆ ದೇಶದ ಆಭಿವೃದ್ಧಿಗೂ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡ ಹಲವು ಯೋಜನೆಗಳ ಲೋಕಾರ್ಪಣೆ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ, ಡಬಲ್ ಎಂಜಿನ್‌ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸುವವರಿಗೆ ನಮ್ಮ ಅಭಿವೃದ್ಧಿಯೇ ಉತ್ತರ ಎಂದು  ತಿಳಿಸಿದರು.

ಎಸ್‌ಇಜೆಡ್ ಮಾರ್ಗಸೂಚಿಗಳನ್ನು ಬದಲಿಸಬೇಕು ಎಂಬ 30 ವರ್ಷಗಳ ಬೇಡಿಕೆ ಈಗ ಈಡೇರಿದೆ. ಮೋದಿ ಅವರು ಸಿಆರ್‌ಜೆಡ್ ಮಾಸ್ಟರ್ ಪ್ಲಾನ್‌ಅನ್ನು ಅನುಮೋದಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಎರಡು ಬಂದರುಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇನ್ನೆರಡು ಬಂದರುಗಳ ಸಂರ್ಥ್ಯವನ್ನು ಹೆಚ್ಚಿಸಲಾಗಿದೆ. ನವಕರ್ನಾಟಕದ ಅಭಿವೃದ್ಧಿಯಲ್ಲಿ ನವ ಭಾರತದ ಅಭಿವೃದ್ಧಿಯೂ ಅಡಗಿದೆ ಎಂದರು.