ಮನೆ ರಾಜ್ಯ ಚಾಮರಾಜನಗರ: ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ; ಆರು ಮಂದಿ ಪೊಲೀಸರ ವಶಕ್ಕೆ

ಚಾಮರಾಜನಗರ: ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ; ಆರು ಮಂದಿ ಪೊಲೀಸರ ವಶಕ್ಕೆ

0

ಚಾಮರಾಜನಗರ (Chamarajanagar): ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ನಡೆದ ಗಲಾಟೆ ಸಂಬಂಧ ಪೊಲೀಸರು ಆರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ್ ಅಸ್ಗರ್, ಬಾಬು ಅಶ್ರಫ್, ಅಸ್ಗರ್ ಪಾಷಾ, ಮಹೇಶ್, ಮನೋಜ್ ಮತ್ತು ಸಚಿನ್‌ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಗರದ ಸಂತೇಮರಹಳ್ಳಿ ವೃತ್ತದ ಬಳಿ ಶನಿವಾರ ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದಿತ್ತು. ಈ ವಿಚಾರವಾಗಿ ಯುವಕರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೋಮವಾರ ಜಿಲ್ಲಾಧಿಕಾರಿ ಅವರೊಂದಿಗೆ ಸಭೆ ನಡೆಸಲಾಗುವುದು ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ ಪಿ, ವ್ಹೀಲಿಂಗ್ ಗೆ ಕಡಿವಾಣ ಹಾಕುವುದಕ್ಕೆ ವಿಶೇಷ ತಂಡ ರಚಿಸಲಾಗುವುದು. ಈಗಾಗಲೇ ಪೊಲೀಸರು ನಿಗಾ ಇಟ್ಟಿದ್ದಾರೆ. ಹಾಗಿದ್ದರೂ ಕೆಲವರು ವ್ಹೀಲಿಂಗ್ ಮಾಡುತ್ತಿದ್ದಾರೆ. ಸೈಕಲ್ ವೀಲ್ಹಿಂಗ್ ನಿಂದಾಗಿ ಶನಿವಾರ ಗಲಾಟೆಯೇ ನಡೆದಿದೆ. ನಗರ ಮಾತ್ರವಲ್ಲದೇ ಇಡೀ‌ ಜಿಲ್ಲೆಯಲ್ಲಿ ಕಡಿವಾಣ ಹಾಕಲಾಗುವುದು ಎಂದರು.

ಈ ಮಧ್ಯೆ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಸಿಬ್ಬಂದಿ ಭಾನುವಾರ ನಗರದಲ್ಲಿ ಪಥ ಸಂಚಲನ ನಡೆಸಿದರು.

ಎಸ್‌ಪಿ ಟಿ.ಪಿ.ಶಿವಕುಮಾರ್, ಎಎಸ್‌ಪಿ ಸುಂದರ್ ರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಡಿವೈಎಸ್‌ಪಿ ಸೋಮಣ್ಣ, ಇನ್‌ಸ್ಪೆಕ್ಟರ್‌ಗಳು, ಸಬ್ ಇನ್‌ಸ್ಪೆಕ್ಟರ್‌ಗಳು ಇದ್ದರು.