ಬೆಂಗಳೂರು(Bengaluru): ನಗರದಲ್ಲಿ ಭಾನುವಾರ ಸಂಜೆ ಬಳಿಕ ಸುರಿದ ಭಾರೀ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಅವಾಂತರಗಳು ನಡೆದಿದ್ದು, ಅಗತ್ಯ ಕಾರ್ಯಾಚರಣೆಗೆ ಎರಡು ಎನ್ಡಿಆರ್ಎಫ್ ತಂಡ ನಿಯೋಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಸೋಮವಾರ ಮಾತನಾಡಿದ ಅವರು, ಮಳೆ ಹಾನಿಯ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರ ಜೊತೆಗೂ ಮಾತನಾಡಿದ್ದೇನೆ. ನಗರದ ಹಲವು ಕಡೆಗಳಲ್ಲಿ ರಸ್ತೆಯಲ್ಲಿ ನಿಂತಿರುವ ನೀರು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. 30 ಮಂದಿಯನ್ನು ಒಳಗೊಂಡ ಎರಡು ತಂಡಗಳನ್ನು ಮಹದೇವಪುರ ಹಾಗೂ ಬೊಮ್ಮನಹಳ್ಳಿಗೆ ಕಲುಹಿಸಿಕೊಡಲಾಗಿದೆ ಎಂದರು.
ಕಾವೇರಿ ನೀರು ನಿರ್ವಹಣೆ bwssb ಟಿ ಕೆ ಹಳ್ಳಿ ಯೂನಿಟ್ಗೆ ಹೆಚ್ಚು ನೀಡು ಬಂದು ತೊಂದರೆ ಆಗಿದೆ. ಈ ಬಗ್ಗೆ ಬೆಳಗ್ಗೆ ಗೊತ್ತಾಗಿದೆ. ಅಲ್ಲಿಗೆ ಭೇಟಿ ನೀಡುತ್ತೇನೆ ಈಗಾಗಲೇ bwssb ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳಿಸಲಾಗಿದೆ ಎಂದು ತಿಳಿಸಿದರು.
ಯಂತ್ರೋಪಕರಣ ಮೂಲಕ ನೀರು ತೆರವು ಕಾರ್ಯಾಚರಣೆ ಆರಂಭಗೊಂಡಿದ್ದು, ಸಾಯಕಾಂಲ ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದರು. ಟಿಕೆ ಹಳ್ಳಿ ಯೂನಿಟ್ಗೆ ನೀರು ನುಗ್ಗಿರುವ ಪರಿಣಾಮ ಬೆಂಗಳೂರಿಗೆ ಎರಡು ದಿನಗಳ ಕಾಲ ನೀರು ಪೂರೈಕೆಗೂ ಸಮಸ್ಯೆ ಆಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಗಳು ನಡೆಯುತ್ತಿದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.