ದುಬೈ(Dubai): ದುಬೈ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಸೂಪರ್ ಫೋರ್ ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಅರ್ಧಶತಕ ಗಳಿಸಿದ ಅವರು, ತಮಗೀಗ ಉತ್ಸಾಹ ಮರಳಿದೆ ಎಂದು ಹೇಳಿಕೊಂಡಿದ್ದಾರೆ.
44 ಎಸೆತ ಎದುರಿಸಿದ ಕೊಹ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 60 ರನ್ ಗಳಿಸಿ ಕೊನೆಯ ಓವರ್ ತನಕ ಆಡಿದ್ದರು.ಗುಂಪು ಹಂತದ ಎರಡು ಪಂದ್ಯಗಳಲ್ಲಿ ಅವರು 35 ಹಾಗೂ ಅಜೇಯ 59 ರನ್ ಗಳಿಸಿದ್ದರು.
ಪಂದ್ಯದ ಬಳಿಕ ಮಾತನಾಡಿದ ಅವರು, ಟೀಕೆಗಳ ಬಗ್ಗೆ ನಾನೆಂದಿಗೂ ತಲೆ ಕೆಡಿಸಿಕೊಂಡಿಲ್ಲ. 14 ವರ್ಷಗಳಿಂದ ಕ್ರಿಕೆಟ್ ಆಡುತ್ತಿದ್ದೇನೆ. ಇದು ಆಕಸ್ಮಿಕವಲ್ಲ. ಜನರಿಗೆ ಅವರದ್ದೇ ಆದ ಅಭಿಪ್ರಾಯಗಳಿವೆ. ಆದರೆ ಅದು ನನ್ನ ಸಂತಸಕ್ಕೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ಪ್ರವಾಸದಿಂದ ಹೊರಗುಳಿದಿದ್ದ ಅವರು ಏಷ್ಯಾ ಕಪ್ ಟೂರ್ನಿಯಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.
ತಂಡದಿಂದ ಕೆಲ ಕಾಲ ಹೊರಗುಳಿದಿದ್ದು ವಿಶ್ರಾಂತಿಯನ್ನು ನೀಡಿತು. ಅದರ ಅರ್ಥ ಜೀವನ ಅಲ್ಲಿಗೆ ಕೊನೆಯಾಯಿತು ಎಂದಲ್ಲ. ನಾನು ತಂಡಕ್ಕೆ ಮರಳಿದಾಗ ಇಲ್ಲಿನ ಪರಿಸರ ಅದ್ಭುತವಾಗಿ ಕಾಣಿಸಿತು. ಇದು ನನ್ನಲ್ಲಿ ಉತ್ಸಾಹವನ್ನು ಮರಳಿಸಿತು. ನಾನು ಈ ಕ್ಷಣ ಮತ್ತೊಮ್ಮೆ ಆಡಲು ಇಷ್ಟಪಡುತ್ತೇನೆ. ಬ್ಯಾಟಿಂಗ್ ಅನ್ನು ಇಷ್ಟಪಡುತ್ತಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.
ಭಾನುವಾರ ರಾತ್ರಿ ನಡೆದ ರೋಚಕ ಪಂದ್ಯದಲ್ಲಿ ಪಾಕಿಸ್ತಾನ 5 ವಿಕೆಟ್ಗಳಿಂದ ಜಯ ಗಳಿಸಿದೆ. ವಿರಾಟ್ ಕೊಹ್ಲಿ ಅರ್ಧಶತಕದ (60; 44ಎ) ಬಲದಿಂದ ಭಾರತ ತಂಡವು 20 ಓವರ್ಗಳಲ್ಲಿ 7 ವಿಕೆಟ್ಗಳಿಗೆ 181 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಪಾಕ್ ತಂಡವು 19.5 ಓವರ್ಗಳಲ್ಲಿ 5 ವಿಕೆಟ್ಗಳಿಗೆ 182 ರನ್ ಗಳಿಸಿ ಗೆದ್ದಿತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.