ಮೈಸೂರು(Mysuru): ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಇಂದು ಅರಮನೆ ಪ್ರವೇಶ ಮಾಡಬೇಕಾಗಿದ್ದ ಎರಡನೇ ಹಂತದ ಗಜಪಡೆಗೆ ಮಾಡಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದುಗೊಳಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಡಿಸಿಎಫ್ ಕರಿಕಾಳನ್, ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಈಗಾಗಲೇ ಅಭಿಮನ್ಯು ನೇತೃತ್ವದ ಮೊದಲ ಹಂತದ ಅರ್ಜುನ, ಗೋಪಾಲಸ್ವಾಮಿ, ಧನಂಜಯ, ಮಹೇಂದ್ರ, ಭೀಮ, ಕಾವೇರಿ, ಚೈತ್ರ ಮತ್ತು ಲಕ್ಷೀ ಆನೆಗಳು ಆಗಸ್ಟ್ 7 ರಂದು ಗಜಪಯಣದ ಮೂಲಕ ಆಗಮಿಸಿ ಅಗಸ್ಟ್ 10 ರಂದು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಸಾಂಪ್ರದಾಯಿಕ ಪೂಜೆಯೊಂದಿಗೆ ಅರಮನೆ ಪ್ರವೇಶಿಸಿ ತಾಲೀಮು ಆರಂಭಿಸಿವೆ ಎಂದು ಹೇಳಿದರು.
ಇಂದು ಎರಡನೇ ಹಂತದ ಆನೆಗಳು ಅರಮನೆ ಪ್ರವೇಶ ಮಾಡಲಿದ್ದು, ಈ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಬೇಕಿತ್ತು. ಆದರೆ ಸಚಿವರ ನಿಧನದ ಹಿನ್ನಲೆಯಲ್ಲಿ ಪೂಜೆ ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.
ರಾಂಪುರ ಶಿಬಿರದ 18 ವರ್ಷದ ಅತ್ಯಂತ ಕಿರಿಯ ಆನೆ ಪಾರ್ಥಸಾರಥಿ, ದುಬಾರಿ ಆನೆ ಶಿಬಿರದ ಶ್ರೀರಾಮ ಮತ್ತು ಸುಗ್ರೀವ ಇದರೊಂದಿಗೆ ಗೋಪಿ ಹಾಗೂ ವಿಜಯ ಶಿಬಿರದಿಂದ ಆಗಮಿಸಿದ್ದು, ಅರಮನೆ ಪ್ರವೇಶ ಮಾಡಲಿರುವ ಎರಡನೇ ಹಂತದ ಗಜಪಡೆಯ ಆನೆಗಳಾಗಿವೆ.
ನಾಳೆ ಸಿಡಿಮದ್ದು ತಾಲೀಮು: ಇಂದು ಎರಡನೇ ಹಂತದ ಗಜಪಡೆ ಅರಮನೆಗೆ ಆಗಮಿಸಿದ್ದು, ನಾಳೆ 14 ಆನೆಗಳನ್ನು ಸೇರಿಸಿ ಒಟ್ಟಾಗಿ ಮೊದಲ ಹಂತದ ಸಿಡಿಮದ್ದು ತಾಲೀಮು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆ.9 ರಂದು ಮೊದಲ ಹಂತದಲ್ಲಿ ಆಗಮಿಸಿದ 9 ಗಜಪಡೆ ಹಾಗೂ ಎರಡನೇ ಹಂತದ 5 ಗಜಪಡೆಗಳನ್ನು ಒಟ್ಟಾಗಿ ತೂಕ ಹಾಕಿಸಲಾಗುವುದು ಎಂದು ಡಿಸಿಎಫ್ ಕರಿಕಾಳನ್ ಮಾಹಿತಿ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.