ನವದೆಹಲಿ(New delhii): `ನೋಂದಾಯಿತ, ಮಾನ್ಯತೆ ಇಲ್ಲದ ರಾಜಕೀಯ ಪಕ್ಷ’ಗಳ (ಆರ್ಯುಪಿಪಿ) ವಿರುದ್ಧದ ತೆರಿಗೆ ವಂಚನೆ ಆರೋಪ ಹಾಗೂ ಸಂಶಯಾಸ್ಪದ ಹಣಕಾಸು ವ್ಯವಹಾರಗಳ ಕುರಿತ ತನಿಖೆಗೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಿದ್ದಾರೆ.
ಗುಜರಾತ್, ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸಗಡ, ಹರಿಯಾಣ ಸೇರಿದಂತೆ ಕನಿಷ್ಠ 110 ಸ್ಥಳಗಳಲ್ಲಿ ಬುಧವಾರ ದಾಳಿಗಳನ್ನು ನಡೆಸಲಾಗಿದೆ ಎಂದು ಇಲಾಖೆ ಮೂಲಗಳು ಹೇಳಿವೆ.
ಆರ್ಯುಪಿಪಿಗಳು ಹಾಗೂ ಅವರು ಪ್ರವರ್ತಕರ ಆದಾಯದ ಮೂಲ ಹಾಗೂ ವೆಚ್ಚ ಕುರಿತು ಇಲಾಖೆಯು ತನಿಖೆ ಕೈಗೊಂಡಿದೆ. ಕಾನೂನು ಬಾಹಿರವಾಗಿ ಈ ಪಕ್ಷಗಳು ದೇಣಿಗೆ ಪಡೆಯುತ್ತಿವೆ ಎಂಬ ಆರೋಪಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ಯುಪಿಪಿಗಳಿಗೆ ಸಂಬಂಧಿಸಿ ಇತ್ತೀಚೆಗೆ ಚುನಾವಣಾ ಆಯೋಗವು ಮಾಡಿದ್ದ ಶಿಫಾರಸಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಆರ್ಯುಪಿಪಿಗಳಿಗೆ ಸಂಬಂಧಿಸಿ ಇತ್ತೀಚೆಗೆ ಆಯೋಗವು ಭೌತಿಕ ಪರಿಶೀಲನೆ ಕೈಗೊಂಡಿತ್ತು. ಈ ಪೈಕಿ ಅಸ್ತಿತ್ವದಲ್ಲಿಯೇ ಇರದ 198 ಪಕ್ಷಗಳನ್ನು ಆರ್ಯುಪಿಪಿ ಪಟ್ಟಿಯಿಂದ ಆಯೋಗವು ತೆಗೆದುಹಾಕಿತ್ತು.
ಅಧಿಕೃತ ಮೂಲಗಳ ಪ್ರಕಾರ, ದೇಶದಲ್ಲಿ 2,800 ನೋಂದಾಯಿತ, ಮಾನ್ಯತೆರಹಿತ ಪಕ್ಷಗಳಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.