ಬಳ್ಳಾರಿ(Ballari): ತಂಗಿಯ ತಲೆಯ ಮೇಲೆ ಕೆರೆ ಬಂಡೆ ಎತ್ತಿಹಾಕಿ ಕೊಲೆ ಮಾಡಿದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಸಿರುಗುಪ್ಪ ಪಟ್ಟಣದಲ್ಲಿ 2017ರ ಫೆಬ್ರುವರಿ 18ರಂದು ಈ ಘಟನೆ ನಡೆದಿತ್ತು. ಜೀವಾವಧಿ ಶಿಕ್ಷೆಗೊಳಗಾದ ನಾಗರಾಜ ತನ್ನ ತಾಯಿ ಮತ್ತು ತಂಗಿ ಶಕುಂತಲಾ ಜತೆ ಜಗಳ ತೆಗೆದು, ತಂಗಿಯನ್ನು ತಳ್ಳಿ ಆಕೆ ನೆಲಕ್ಕೆ ಬಿದ್ದಾಗ, ಮನೆಯ ಹೊರಗಿದ್ದ ಕೆರೆ ಬಂಡೆ ತಂದು ತಲೆ ಮೇಲೆ ಎತ್ತಿಹಾಕಿ ಕೊಲೆ ಮಾಡಿದ್ದ.
ತಕ್ಷಣ ಆಕೆಯನ್ನು ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ ಎಂದು ಪ್ರಾಸಿಕ್ಯೂಷನ್ ಅರೋಪಿಸಿತ್ತು.
ಈ ಘಟನೆ ಕುರಿತು ಪ್ರತ್ಯಕ್ಷದರ್ಶಿಗಳು ಸಾಕ್ಷ್ಯ ಹೇಳಿದ್ದರು.ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಡಿ. ವಿನಯ್ ನಾಗರಾಜನಿಗೆ ಕೊಲೆ ಅಪರಾಧಕ್ಕೆ ಜೀವಾವಧಿ ಶಿಕ್ಷೆ, ₹ 20 ಸಾವಿರ ದಂಡ ಮತ್ತು ಐಪಿಸಿ ಸೆಕ್ಷನ್ 323ರ ಅಡಿ ಮಾಡಿದ ಅಪರಾಧಕ್ಕೆ ಮೂರು ತಿಂಗಳ ಸಾದಾ ಸಜೆ ವಿಧಿಸಿ ಆದೇಶಿಸಿದ್ದಾರೆ.
ದಂಡದ ಹಣದಲ್ಲಿ ಶೇ 70ರಷ್ಟನ್ನು ಮೃತಳ ತಾಯಿಗೆ, ಉಳಿದ ಶೇ 30ರಷ್ಟನ್ನು ಸರ್ಕಾರಕ್ಕೆ ಪಾವತಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ಹಿಂದಿನ ಸರ್ಕಾರಿ ಅಭಿಯೋಜಕರಾಗಿದ್ದ ಲಕ್ಷ್ಮೀದೇವಿ ಪಾಟೀಲ್ ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಸರ್ಕಾರಿ ಅಭಿಯೋಜಕ ಶೇಖರಪ್ಪ ಪ್ರಾಸಿಕ್ಯೂಷನ್ ಪರವಾಗಿ ವಾದಿಸಿದ್ದರು. ಅಂದಿನ ಸಿರುಗುಪ್ಪ ಇನ್ಸ್ಪೆಕ್ಟರ್ ಎಂ. ನಾಗರೆಡ್ಡಿ ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.