ನವದೆಹಲಿ(Newdelhi): ಸೆಂಟ್ರಲ್ ವಿಸ್ತಾದ ಪ್ರಮುಖ ಭಾಗವಾದ ರಾಜಪಥಕ್ಕೆ ‘ಕರ್ತವ್ಯಪಥ’ ಎಂದು ಮರುನಾಮಕರಣ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ವಿಜಯ ಚೌಕದಿಂದ ಇಂಡಿಯಾ ಗೇಟ್ ವರೆಗಿನ ಈ ನವೀಕೃತ ಪ್ರದೇಶವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ.
ಸೆಂಟ್ರಲ್ ವಿಸ್ತಾ ಪ್ರದೇಶದಲ್ಲಿರುವ ಇಂಡಿಯಾ ಗೇಟ್ನಿಂದ ರಾಷ್ಟ್ರಪತಿ ಭವನದವರೆಗೆ ವ್ಯಾಪಿಸಿರುವ ರಸ್ತೆಯೇ ರಾಜಪಥ. ಇದೇ ರಾಜಪಥದಲ್ಲಿ ಗಣರಾಜ್ಯೋತ್ಸವದ ಪಥಸಂಚಲನ ನಡೆಯುತ್ತದೆ.
ದೇಶದ ಅಧಿಕಾರ ಕೇಂದ್ರವಾಗಿರುವ ದೆಹಲಿಯ ಲ್ಯುಟೆನ್ಸ್ ಪ್ರದೇಶವನ್ನು ಪುನರ್ ಅಭಿವೃದ್ಧಿಪಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರವು 2019ರಲ್ಲಿ ಪ್ರಕಟಿಸಿತು. ಸಂಸತ್ ಭವನ, ಪ್ರಧಾನಿ ಕಚೇರಿ, ಪ್ರಧಾನಿ ನಿವಾಸ, ಉಪರಾಷ್ಟ್ರಪತಿ ನಿವಾಸಗಳನ್ನು ಹೊಸದಾಗಿ ನಿರ್ಮಿಸುವುದು ಈ ಯೋಜನೆಯಲ್ಲಿ ಸೇರಿವೆ.
ಸಚಿವಾಲಯಗಳು ಮತ್ತು ಇಲಾಖೆಗಳ ಕಚೇರಿಗಳಿಗಾಗಿ ಇತರ ಕಟ್ಟಡಗಳನ್ನೂ ನಿರ್ಮಿಸಲಾಗುವುದು. ಇದು ₹20,000 ಕೋಟಿ ವೆಚ್ಚದ ಯೋಜನೆ.ಇದರ ಭಾಗವಾಗಿ ರಾಜಪಥದ ಉದ್ದಕ್ಕೂ ಇರುವ ಸೆಂಟ್ರಲ್ ವಿಸ್ತಾ ಅವೆನ್ಯೂ ಪ್ರದೇಶವನ್ನೂ ನವೀಕರಿಸಲಾಗಿದೆ.
1911ರಲ್ಲಿ ಬ್ರಿಟನ್ ರಾಜ 5ನೇ ಜಾರ್ಜ್ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ಈ ರಸ್ತೆ, ಅದರ ಇಕ್ಕೆಲದಲ್ಲಿನ ಕೊಳ ಮತ್ತು ಹುಲ್ಲುಹಾಸನ್ನು ಅಭಿವೃದ್ಧಿಪಡಿಸಲಾಗಿತ್ತು. ಈ ಕಾರಣದಿಂದ ಈ ಮಾರ್ಗಕ್ಕೆ ಕಿಂಗ್ಸ್ವೇ ಎಂದು ಹೆಸರಿಡಲಾಗಿತ್ತು. ನಂತರದಲ್ಲಿ ಇದನ್ನು ರಾಜಪಥ ಎಂದು ಬದಲಿಸಲಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.