ಮನೆ ಕಾನೂನು ಹಿಜಾಬ್ ವಿವಾದ: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ಹಿಜಾಬ್ ವಿವಾದ: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

0

ನವದೆಹಲಿ(Newdelhi): ಕರ್ನಾಟಕ ಶಾಲಾ ಕಾಲೇಜುಗಳ ತರಗತಿಗಳ ಒಳಗೆ ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ್ ನೀಡಿದ​ ಆದೇಶದ ವಿರುದ್ಧ ಸುಪ್ರೀಂಕೋರ್ಟ್’ಗೆ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು  ಸೋಮವಾರಕ್ಕೆ (ಸೆ.12 ರಂದು) ಮುಂದೂಡಲಾಗಿದೆ.

ಮೂರನೇ ದಿನದ ವಿಚಾರಣೆಯ ವಾದ- ಪ್ರತಿವಾದಗಳನ್ನು ಆಲಿಸಿದ ಬಳಿಕ ವಿಚಾರಣೆ ಮುಂದೂಡಲಾಗಿದೆ.

ಮೊದಲ ದಿನ ವಿಚಾರಣೆಯಲ್ಲಿ ಫಿರ್ಯಾದುದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ದೇವದತ್​ ಕಾಮತ್​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದ್ದರು.

ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ನಿನ್ನೆ ನಡೆದ ಎರಡನೇ ದಿನದ ವಿಚಾರಣೆಯಲ್ಲಿ “ಹಿಜಾಬ್​ ಧರಿಸುವುದು ಹಕ್ಕು” ಎಂದು ವಾದ ಮಂಡಿಸಿದಾಗ ಕೋರ್ಟ್​, ಧರಿಸುವ ಹಕ್ಕಿದ್ದರೆ, ಅದನ್ನು ಧರಿಸದೇ ಇರುವ ಹಕ್ಕೂ ಇದೆ ಎಂದು ನ್ಯಾಯಾಧೀಶರು ಹೇಳಿದ್ದರು.

ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.