ಮಂಡ್ಯ(Mandya): ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಲ್ಲಾ ಕಡೆ ಇದ್ದರೆ ನಾನೇನು ಮಾಡಲು ಸಾಧ್ಯ? ಎಂದು ಸಂಸದೆ ಸುಮಲತಾ ಹೇಳಿದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ನಾನು ಪಾಂಡವಪುರ ಶಾಸಕ, ಮದ್ದೂರು ಶಾಸಕ ಅಥವಾ ಮಳವಳ್ಳಿ ಶಾಸಕ ಎಂದು ಯಾವುದೇ ಪಕ್ಷ, ಶಾಸಕರ ಹೆಸರು ಪ್ರಸ್ತಾಪ ಮಾಡಿಲ್ಲ. ಯಾರನ್ನೂ ಗುರಿಯಾಗಿಸಿಕೊಂಡು ಹೇಳಿದ ಮಾತಲ್ಲ. ಅವರವರೇ ವೀರಾವೇಶದಿಂದ ನನ್ನ ಬಗ್ಗೆ ಆರೋಪ ಮಾಡುತ್ತಾ ಮಾತನಾಡುತ್ತಿದ್ದಾರೆ. ನಾನು ಯಾರಿಗೆ ಹೇಳಿದೆನೋ ಅದು ಅವರಿಗೆ ಖಂಡಿತ ತಟ್ಟೇ ತಟ್ಟುತ್ತೆ ಎಂದು ಮತ್ತೆ ಕುಟುಕಿದರು.
ಜೆಡಿಎಸ್ ಶಾಸಕರ ವಿರುದ್ದ ಕಿಡಿಕಾರಿದ ಸಂಸದೆ, ಮಂಡ್ಯ ರಾಜಕಾರಣವೇ ಬೇರೆ ರೀತಿ ಇದೆ. ಪ್ರತಿ ತಾಲ್ಲೂಕಿನಲ್ಲೂ ನಾನು ಕೆಡಿಪಿ ಸಭೆ ಮಾಡಿಕೊಂಡು ಬಂದೆ. ಆದರೆ ಶಾಸಕರು ಸೇರಿ ಎಂಪಿ ಏನಿದ್ದರೂ ದಿಶಾ ಸಭೆ ಮಾತ್ರ ನಡೆಸಬೇಕು. ತಾಲೂಕು ಮಟ್ಟದಲ್ಲಿ ಸಭೆ ಮಾಡಲು ಅಧಿಕಾರ ಇಲ್ಲ ಎಂದು ಪತ್ರ ಬರೆದು ಅದನ್ನು ನಿಲ್ಲಿಸಿಯೇ ಬಿಟ್ಟರು ಎಂದು ಆಪಾದಿಸಿದರು.
ಕೆ ಆರ್ ನಗರದಲ್ಲಿ ಕೆಲವು ತಿಂಗಳ ಹಿಂದೆ ಗಲಾಟೆ ಆಯ್ತು. ಅಲ್ಲಿ ಹೋದಾಗ, ಅಲ್ಲಿಗೆ ಬಂದಿದ್ದ ಅಧಿಕಾರಿಗಳನ್ನು ಕರೆ ಮಾಡಿ ವಾಪಸ್ ಕರೆಸಿಕೊಳ್ತಾರೆ. ನಂತರ ನನ್ನ ಮೇಲೆ ಹಲ್ಲೆ ಮಾಡೋಕೆ ಗೂಂಡಾಗಳನ್ನು ಕಳುಹಿಸುತ್ತಾರೆ. ಎಂಪಿ ಇಲ್ಲಿಗೆ ಬರಬಾರದು ಎಂದು ಹೆದರಿಸುತ್ತಾರೆ ಎಂದು ಆರೋಪಿಸಿದರು.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.