ಮಂಡ್ಯ(Mandya): ಮಳೆ ಅನಾಹುತ ಇನ್ನೂ ಮುಂದುವರಿಯಲಿದ್ದು, ದೇಶಾದ್ಯಂತ ಜಲಪ್ರಳಯ ಎದುರಾಗಲಿದೆ. ಸುನಾಮಿ ಬರುವ ಸಾಧ್ಯತೆಯೂ ಇದೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಬೂಕನಕೆರೆಗೆ ಆಗಮಿಸಿದ್ದ ಅವರು ಮಾತನಾಡಿ, ಜನರು ಮನೆಯಿಂದ ಹೊರಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ. ಭೂಮಿಯಿಂದ ಹೊಸ ಹೊಸ ವಿಷಜಂತುಗಳು ಉದ್ಭವಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕೊರೋನಾ ಬಗ್ಗೆ ಈ ಹಿಂದೆಯೇ ನಾನು ಹೇಳಿದ್ದೆ, ಅಲ್ಲದೇ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ. ಇದೀಗ ನಾನು ಹೇಳಿದ ಎಲ್ಲ ಮಾತುಗಳು, ಭವಿಷ್ಯಗಳು ನಿಜವಾಗಿದೆ. ಇದಕ್ಕಿಂತಲೂ ಹೆಚ್ಚಿನ ಕಷ್ಟ ಕಾಲ ಎದುರಾಗಲಿದೆ. ಇದಕ್ಕೆಲ್ಲ ದೇವರನ್ನು ಪೂಜಿಸುವುದು ಒಂದೇ ಪರಿಹಾರ ಎಂದಿದ್ದಾರೆ. ಇತ್ತೀಚಿಗೆ ಭಗವಂತನ ಪೂಜೆ ಆಡಂಬರವಾಗಿದೆ ಎಂದು ಬೇಸರಿಸಿರುವ ಅವರು, ಯೋಗ್ಯ ಸಾಧುಗಳಿದ್ದಾರೆ, ಸ್ವಾಮೀಜಿಗಳ ಗದ್ದುಗೆಗಳಿವೆ. ಎಲ್ಲರೂ ಸೇರಿ ಪ್ರಾರ್ಥಿಸಿದರೆ ಜಗತ್ತು ಉಳಿಯುತ್ತದೆ ಎಂದು ಸಲಹೆ ನೀಡಿದ್ದಾರೆ.
ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ಕೇಳಿ ಬಂದಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಮಠದ ಶ್ರೀಗಳು ಮಾರ್ಮಿಕವಾಗಿ ಉತ್ತರಿಸಿದ್ದಾರೆ. ನೀಚಂಗೆ ದೊರೆತನವು, ಹೇಡಿಂಗೆ ಹಿರಿತನವೂ, ಮೂಡಂಗೆ ಗುರುತನವೂ ಸಿಕ್ಕಿರುವುದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಇಂತಹ ಆರೋಪಗಳು ಮುಂದೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಶ್ರೀಗಳು ಎಚ್ಚರಿಸಿದ್ದಾರೆ.
ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಲು ಕೋಡಿಮಠ ಶ್ರೀಗಳು ನಿರಾಕರಿಸಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.