ಮನೆ ಮನರಂಜನೆ ಮೈಸೂರಿನ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ

ಮೈಸೂರಿನ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ

0

ಮೈಸೂರು(Mysuru): ದಿ. ಪುನೀತ್ ರಾಜ್​ಕುಮಾರ್ ಅವರ ನೆಚ್ಚಿನ ಸ್ಥಳವಾಗಿರುವ ನಗರದ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದ್ದಾರೆ.

ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮಕ್ಕೆ ಇಂದು ಭೇಟಿ ನೀಡಿದ ನಟ ವಿಶಾಲ್ ಅವರನ್ನು ಟ್ರಸ್ಟ್​​ನವರು ಬರಮಾಡಿಕೊಂಡರು‌.

ಪುನೀತ್ ಅವರ ಕಾರ್ಯಕ್ರಮದಲ್ಲಿ ಶಕ್ತಿಧಾಮಕ್ಕೆ ಸಹಾಯ ಮಾಡುತ್ತೇನೆ ಎಂದಿದ್ದ ವಿಶಾಲ್ ಅವರು ಘೋಷಿಸಿದ್ದರು. ಇದೀಗ ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ.

ನಂತರ ಮಾತನಾಡಿದ ನಟ ವಿಶಾಲ್, ನಾನು ಯಾವಾಗಲೂ ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ. ಇದಕ್ಕೆ ನನಗೆ ರಾಜ್ ಕುಟುಂಬದವರು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇಲ್ಲಿಗೆ ಬಂದಾಗ ನನಗೆ ದೇವಸ್ಥಾನಕ್ಕೆ ಹೋದ ಅನುಭವ ನೀಡಿತು. ಆದರೆ ದೇವಸ್ಥಾನಕ್ಕೆ ಹೋದರೆ ಒಂದು ದೇವರ ದರ್ಶನ ಪಡೆಯಬಹುದು. ಇಲ್ಲಿ ಒಂದೊಂದು ಮಕ್ಕಳಲ್ಲೂ ಒಂದೊಂದು ದೇವರನ್ನು ನೋಡಿದೆ ಎಂದು ತಿಳಿಸಿದ್ದಾರೆ.

ಇನ್ನು ಶಕ್ತಿಧಾಮದಲ್ಲಿನ ಮಕ್ಕಳು ತುಂಬಾ ಲವ ಲವಿಕೆಯಿಂದ ಇದ್ದಾರೆ. ಪುನೀತ್ ರಾಜ್ ಕುಮಾರ್ ಹಾಗೂ ಗೀತಮ್ಮ ಅವರದ್ದು ಅತ್ಯುತ್ತಮವಾದ ಕೆಲಸ. ಈ ಬಗ್ಗೆ ನಾನು ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ಅಲ್ಲದೆ ರಾಜ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.  ಮಕ್ಕಳ ಜೊತೆ ಸಹ ನಾನು ಮಾತನಾಡಿದೆ. ಮಕ್ಕಳು ಡ್ಯಾನ್ಸ್ ಮಾಡಿದ್ರು, ಆಟವಾಡಿದ್ರು, ಹಾಡು ಹೇಳಿದರು. ಎಲ್ಲರೂ ತುಂಬಾ ಉತ್ಸಹದಿಂದ ಇದ್ದಾರೆ. ಇಲ್ಲಿರುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಇದೆ ಎಂದು ವಿಶಾಲ್ ತಿಳಿಸಿದರು.

ನಟ ಪುನೀತ್ ರಾಜ್​ಕುಮಾರ್ ಅವರ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ವಿಶಾಲ್ ಅವರು ಪುನೀತ್​ ಅವರಂತೆ ಸಮಾಜಕ್ಕೆ ಸಹಾಯ ಮಾಡಲು ಮುಂದಾಗುತ್ತೇನೆ ಎಂದು ಭರವಸೆ ನೀಡಿದ್ದರು. ‌