ಮನೆ ರಾಜಕೀಯ ದಸರಾ ವೇಳೆ ಮೈಸೂರಿಗೆ ಆಗಮಿಸಲಿದೆ ಭಾರತ್‌ ಜೋಡೋ ಯಾತ್ರೆ

ದಸರಾ ವೇಳೆ ಮೈಸೂರಿಗೆ ಆಗಮಿಸಲಿದೆ ಭಾರತ್‌ ಜೋಡೋ ಯಾತ್ರೆ

0

ಮೈಸೂರು(Mysuru) : ಕಾಂಗ್ರೆಸ್‌ ಪಕ್ಷದ ವತಿಯಿಂದ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ  ಹಮ್ಮಿಕೊಂಡಿರುವ ಭಾರತ್‌ ಜೋಡೋ ಪಾದ ಯಾತ್ರೆಯು ಸೆಪ್ಟೆಂಬರ್ 30 ರಂದು ರಾಜ್ಯಕ್ಕೆ ಆಗಮಿಸಲಿದೆ.

ಅಂದು ಚಾಮರಾಜನಗರ ಜಿಲ್ಲೆಯ ಬೆಂಡಗಳ್ಳಿ ಗ್ರಾಮದ ಮೂಲಕ ಬೇಗೂರು ತಲುಪಲಿದ್ದು, ತ್ರಿಪುರ ಸಂಭಾಂಗಣದ ಮುಂದಿನ ಮೈದಾನದಲ್ಲಿ ರಾತ್ರಿ ತಂಗಲಿದೆ. ಬೆಳಗ್ಗೆ ಅಲ್ಲಿಂದ ಆರಂಭವಾಗುವ ಪಾದಯಾತ್ರೆ ಕಳಲೆಗೇಟ್ ಮೂಲಕ ತಾಂಡವಪುರ ಗ್ರಾಮದ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.  ನಂತರ ರಾತ್ರಿ ಎಂಐಟಿ (MIT) ಕಾಲೇಜಿನ ಮುಂಭಾಗದಲ್ಲಿ ಉಳಿಯಲಿದೆ.

ಭಾರತ್‌ ಜೋಡೋ ಪಾದ ಯಾತ್ರೆಯ ( ಅಕ್ಟೋಬರ್‌ 1 ಮತ್ತು 2ನೇ ತಾರೀಖು) 3ನೇ ದಿನ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ರಾಹುಲ್‍ಗಾಂಧಿ ಪೂಜೆ ಸಲ್ಲಿಸಲಿದ್ದಾರೆ.

ನಂತರ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು, ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನದ ಆವರಣದಲ್ಲಿ ತಂಗಲಿದೆ.

ಅ.3ರಂದು ಅಂದರೆ ನಾಲ್ಕನೆ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಆ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯು ಕೆನಲು ಗ್ರಾಮದ ವನಜಸುಂದರ ಸಭಾಂಗಣದಲ್ಲಿ ಉಪಾಹಾರ ಸೇವಿಸಿ ಟಿ.ಎಸ್.ಛತ್ರ ಗ್ರಾಮದಿಂದ ಮಂಡ್ಯ ಪ್ರವೇಶಿಸಲಿದೆ. ರಾತ್ರಿ ಅಲ್ಲಿನ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.

ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ.  ನಾಗಮಂಗಲದ ಚೌಡೇನಹಳ್ಳಿ ಗೇಟ್‍ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್‍ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. 8ನೇ  ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್‍ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.