ಚುನಾವಣಾ ಮತಯಂತ್ರ (ಇವಿಎಂ) ಅಲಭ್ಯತೆ ಕಾರಣಕ್ಕೆ ಚುನಾವಣೆ ಮುಂದೂಡುವ ನಿರ್ಧಾರ ಕೈಬಿಡಲಾಗಿದೆ ಎಂದು ದೆಹಲಿ ಹೈಕೋರ್ಟ್ ವಕೀಲರ ಸಂಘದ (ಡಿಎಚ್ಸಿಬಿಎ) ಚುನಾವಣಾ ಆಯೋಗ ದೆಹಲಿ ಹೈಕೋರ್ಟ್ಗೆ ತಿಳಿಸಿದ್ದು ನಿಗದಿಯಂತೆ ಚುನಾವಣೆ ನಡೆಯಲಿದೆ.
ಒಂದು ವಾರ ಕಾಲ ನಿರ್ಧಾರ ಅಮಾನತಿನಲ್ಲಿರುತ್ತದೆ ಎಂದು ಆಯೋಗ ತಿಳಿಸಿದೆ. ಆದರೆ, ನಾಮಪತ್ರಗಳು ಇನ್ನೂ ಮುದ್ರಿತವಾಗದ ಕಾರಣ ಈ ಹಿಂದೆ ನಿಗದಿಪಡಿಸಿದಂತೆ ಸೋಮವಾರದ ಬದಲು ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ನ್ಯಾ., ಸಂಜೀವ್ ನರುಲಾ ಅವರಿದ್ದ ಏಕಸದಸ್ಯ ಪೀಠದೆದುರು ಚುನಾವಣಾ ಆಯೋಗ ಈ ವಿಚಾರ ತಿಳಿಸಿತು. ಇವಿಎಂಗಳ ಲಭ್ಯತೆಯಿಲ್ಲದ ಕಾರಣ ಸಂಘದ ಚುನಾವಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಆಯೋಗದ ನಿರ್ಧಾರ ಪ್ರಶ್ನಿಸಿ ಸಂಘ ಮತ್ತು ವಕೀಲ ಸುಕೃತ್ ಗುಪ್ತಾ ಅವರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.
ಇಂದು ಬೆಳಿಗ್ಗೆ ಪ್ರಕರಣದ ವಿಚಾರಣೆ ನಡೆದಾಗ ಚುನಾವಣೆ ಮುಂದೂಡುವುದು ಒಳಿತೆ ಎಂಬ ಬಗ್ಗೆ ತನ್ನ ಸದಸ್ಯರನ್ನು ಕೇಳುವಂತೆ ಆಯೋಗಕ್ಕೆ ನ್ಯಾಯಮೂರ್ತಿಗಳು ಸಲಹೆ ನೀಡಿದ್ದರು. ಊಟದ ನಂತರದ ಅಧಿವೇಶನದಲ್ಲಿ ತನ್ನ ಆದೇಶ ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಚುನಾವಣಾ ಆಯೋಗ ಹೈಕೋರ್ಟ್ಗೆ ತಿಳಿಸಿತು.
ಚುನಾವಣೆಗಾಗಿ ಇವಿಎಂಗಳನ್ನು ಖರೀದಿಸಲು ಭಾರತೀಯ ಚುನಾವಣಾ ಆಯೋಗ ಮತ್ತು ದೆಹಲಿ ವಿಶ್ವವಿದ್ಯಾಲಯದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅದು ವಿವರಿಸಿತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.