ಮೈಸೂರು(Mysuru): ಸಾಮಾನ್ಯರನ್ನು ಗುರುತಿಸಿ ನಾಯಕನನ್ನಾಗಿ ಬೆಳೆಸುತ್ತೇವೆ. ರಾಜಕಾರಣ ಬದುಕಿಗೆ ದಾರಿಯಲ್ಲ. ಇದು ಈಶ್ವರಿಯ ಕಾರ್ಯ ಎಂದು ನಂಬಿದವರು ನಾವು. ಜಾತಿ, ಮತ, ಪಂಥ ಮುರಿದು ತಾಯಿ ಭಾರತಾಂಬೆಯನ್ನು ಮಾತ್ರ ಆರಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದಿಂದ ನಗರದ ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಪ್ರಶಿಕ್ಷಣ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಯು ಪರಿವಾರವಾದ ಇಟ್ಟುಕೊಂಡು ಬಂದದ್ದಲ್ಲ. ರಾಷ್ಟ್ರವಾದ ನಮ್ಮ ಗುರಿ. ಹೀಗಾಗಿ, ಪರಿವಾರವಾದಕ್ಕೆ ತಿಲಾಂಜಲಿ ಇಟ್ಟಿದ್ದೇವೆ ಎಂದರು.
ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ನಮ್ಮ ಪರಿಕಲ್ಪನೆ. ಸ್ವಾತಂತ್ರ್ಯ ನಂತರ ಭಾರತ ಹೇಗಿರಬೇಕು ಎಂಬ ಪರಿಕಲ್ಪನೆಯನ್ನು ಗಾಂಧೀಜಿ ಕೊಟ್ಟಿದ್ದರು. ಸುದೀರ್ಘ ಅವಧಿಗೆ ಕಾಂಗ್ರೆಸ್ ಆಳಿದರೆ ಮನೆ ಮನೆಗಳಲ್ಲಿ ರಾವಣರು ನಿರ್ಮಾಣವಾಗುತ್ತಾರೆ ಎನ್ನುವುದು ಗಾಂಧೀಜಿಗೆ ಗೊತ್ತಿತ್ತು. ಹೀಗಾಗಿ ರಾಮರ ಅವಶ್ಯವಿದೆ ಎಂದು ಬಯಸಿದ್ದರು. ಆದ್ಮರಿಂದ ರಾಜ್ಯದ ಪರಿಕಲ್ಪನೆ ಕೊಟ್ಟರು. ರಾಮ ರಾಜ್ಯವಾಗಲು ಮನೆ ಮನೆಗಳಲ್ಲಿ ರಾಮ ಇರಬೇಕು, ಆಗ ಮಾತ್ರ ಕಾಂಗ್ರೆಸ್ ನಿರ್ಮಾಣ ಮಾಡುವ ರಾವಣರನ್ನು ಸೋಲಿಸಲು ಸಾಧ್ಯ ಎಂದಿದ್ದರು. ಹೀಗಾಗಿ, ರಾಮರ ನಿರ್ಮಾಣದ ಕಾರ್ಯದ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಬಿಜೆಪಿ ತೊಡಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ನಲ್ಲಿ ಗಾಂಧಿ ಕುಟುಂಬದ ವಿಳಾಸವಿದ್ದರೆ ಮಾತ್ರ ಅಧಿಕಾರ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣವಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷವಾಗಲೂ ನಾಲಾಯಕ್ ಆಗಿದೆ. ಅಲ್ಲಿನ ನಾಯಕರೆಲ್ಲರೂ ಹೊರ ಹೋಗಿದ್ದಾರೆ. ಜಿ–23 ಹೊರಗಿದೆ. ಕಾಂಗ್ರೆಸ್ ಒಳಗೂ ಮುಕ್ತವಾಗುತ್ತಿದೆ. ಆದರೆ, ಬಿಜೆಪಿ ಬೆಳೆಯುತ್ತಲೇ ಇದೆ. ಒಂದು ಕಾಲದಲ್ಲಿ ಇಂದಿರಾ–ಇಂಡಿಯಾ ಎನ್ನುತ್ತಿದ್ದರು. ಲೈಟ್ ಕಂಬ ನಿಲ್ಲಿಸಿದ್ದರೂ ಗೆಲ್ಲುತ್ತೇವೆ ಎಂಬ ವಿಶ್ವಾಸ ಆ ಪಕ್ಷದವರಲ್ಲಿತ್ತು. ಈಗ ರಾಹುಲ್ ಗಾಂಧಿ ಕೇರಳಕ್ಕೆ ಓಡಿ ಬರಬೇಕಾಯಿತು. ಸಿದ್ದರಾಮಯ್ಯ ಬಾದಾಮಿಗೆ ಹೋಗಬೇಕಾಯಿತು. ಕ್ಷೇತ್ರವೇ ಇಲ್ಲದಂತಹ ಸ್ಥಿತಿ ಅವರಿಗೆ ಬಂದಿದೆ. ಕುಟುಂಬವಾದದ ರಾಜಕಾರಣದಿಂದ ಕಾಂಗ್ರೆಸ್ ಸರ್ವನಾಶವಾಶಗುತ್ತಿದೆ’ ಎಂದು ವಿಶ್ಲೇಷಿಸಿದರು.
ದೇಶದಲ್ಲಿ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ನವರು ಬಿಜೆಪಿಯಿಂದ ದೂರ ಇಟ್ಟಿದ್ದರು. ಅಲ್ಪಸಂಖ್ಯಾತರ ಭೂತ ಬಿಜೆಪಿ ಎಂದು ಬಿಂಬಿಸಿದ್ದರು. ಇದರಿಂದ, ಗಾಂಧಿ ಕುಟುಂಬ ಹಾಗೂ ಅಲ್ಲಿನ ನಾಯಕರ ಉದ್ದಾರವಾಯಿತೇ ಹೊರತು ಅಲ್ಪಸಂಖ್ಯಾತರ ಅಭಿವೃದ್ಧಿ ಆಗಲೇ ಇಲ್ಲ ಎಂದು ಟೀಕಿಸಿದರು.
ರಾಷ್ಟ್ರೀಯ ವಿಚಾರಧಾರೆ ಇರುವ ಪ್ರತಿಯೊಬ್ಬರಿಗೂ ಗೌರವ ಕೊಡುತ್ತೇವೆ. ಭಾರತಾಂಬೆ ಪೂಜಿಸುವವರು ದೇಶದ ಪ್ರಜೆ ಎನ್ನುವಂತಹ ಕಲ್ಪನೆ ಬಿಜೆಪಿಯದ್ದು. ವಿರೋಧಿಸುವವರು, ದುಷ್ಕೃತ್ಯ ಎಸಗುವವರು ಹಾಗೂ ಪಾಕಿಸ್ತಾನಕ್ಕೆ ಜೈ ಎನ್ನುವವರನ್ನು ವಿರೋಧಿಸಿಯೇ ತೀರುತ್ತೇವೆ ಎಂದರು.
ತಮ್ಮನ್ನು ಕೇವಲ ಬ್ಯಾಂಕ್ ಆಗಿ ಮಾಡಿಕೊಂಡಿದ್ದರು ಎನ್ನುವುದು ಅಲ್ಪಸಂಖ್ಯಾತರಿಗೆ ಅರ್ಥವಾಗಿದೆ. ಹೀಗಾಗಿ ಅವರು ಕಾಂಗ್ರೆಸ್ನಿಂದ ಹೊರ ಬರುತ್ತಿದ್ದಾರೆ ಎಂದು ತಿಳಿಸಿದರು.
ಮುಸ್ಲಿಮರು, ಕ್ರೈಸ್ತರನ್ನೂ ಗುರುತಿಸುವ ಕೆಲಸವನ್ನು ಪಕ್ಷ ಮಾಡಿದೆ. ಹತ್ತಾರು ಹುದ್ದೆಗಳನ್ನು ನೀಡಿದೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ₹ 500 ಕೋಟಿ ಬಿಡುಗಡೆ ಮಾಡಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರ ಮಾಡಿರಲಿಲ್ಲ. ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಶ್ರೇಷ್ಠ ಎನ್ನುವುದನ್ನು ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕರ್ತರು ಮರೆಯಬಾರದು ಎಂದರು.
ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸೈಯದ್ ಸಲಾಂ ಅಧ್ಯಕ್ಷತೆ ವಹಿಸಿದ್ದರು. ಸಂಸದ ಪ್ರತಾಪ ಸಿಂಹ, ವಿಧಾನಪರಿಷತ್ ಸದಸ್ಯ ರವಿಕುಮಾರ್, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪಾ, ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಷ್ಟ್ರೀಯ ಖಜಾಂಚಿ ಡಾ.ಮೊಹಸಿನ್, ಮುಖಂಡ ಮುಕ್ತಾರ್ ಪಠಾಣ್, ಹಜ್ ಸಮಿತಿ ಅಧ್ಯಕ್ಷ ಕಚೇರಿವಾಲಾ, ನಗರ ಮೋರ್ಚಾ ಅಧ್ಯಕ್ಷ ಕಲೀಂ ಪಾಷಾ, ನೂರ್ ಭಾಷಾ, ನಗರ ಘಟಕದ ಅಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂತರ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಇದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.