ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ದಸರಾ ವೇಳೆ ಕೆಲವು ದಿನಗಳಲ್ಲಿ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಸೆ. 26 ರಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನ ಪೂಜಾ ಕಾರ್ಯ ನಡೆಯುವ ಹಿನ್ನೆಲೆ ಅಂದು ಬೆಳಿಗ್ಗೆ 10 ರಿಂದ 1.30 ಗಂಟೆ ತನಕ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಅಕ್ಟೋಬರ್ 4 ರಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಅವರಿಂದ ಆಯುಧ ಪೂಜಾ ಕಾರ್ಯಕ್ರಮ ನಡೆಯಲಿದ್ದು , ಈ ಹಿನ್ನೆಲೆಯಲ್ಲಿ ಅ.4 ರಂದು ಬೆಳಿಗ್ಗೆ 10 ರಿಂದ 1.30 ಗಂಟೆವರೆಗೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.
ಅ. 5 ರಂದು ಅರಮನೆಯಲ್ಲಿ ಯದುವೀರ್ ರಿಂದ ವಿಜಯದಶಮಿಯ ಪೂಜಾ ಕೈಂಕರ್ಯ ನಡೆಯಲಿದ್ದು, ಇಡೀ ದಿನ ಮೈಸೂರು ಅರಮನೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅಂತಿಮವಾಗಿ ಅಕ್ಟೋಬರ್ 20 ರಂದು ಸಿಂಹಾಸನ ವಿಸರ್ಜನೆ ನಡೆಯಲಿದ್ದು, ಅಂದು ಮೈಸೂರು ಅರಮನೆಗೆ ಬೆಳಿಗ್ಗೆ 10 ರಿಂದ 1.30 ಗಂಟೆ ತನಕ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಿ ಮೈಸೂರು ಅರಮನೆ ಮಂಡಳಿ ಆದೇಶ ಹೊರಡಿಸಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.