ಮನೆ ಅಪರಾಧ ನಕಲಿ ಪ್ರಮಾಣ ಪತ್ರ ನೀಡಿ ಮುಂಬಡ್ತಿ: ತಾಲ್ಲೂಕು ಯೋಜನಾಧಿಕಾರಿ ಬಂಧನ

ನಕಲಿ ಪ್ರಮಾಣ ಪತ್ರ ನೀಡಿ ಮುಂಬಡ್ತಿ: ತಾಲ್ಲೂಕು ಯೋಜನಾಧಿಕಾರಿ ಬಂಧನ

0

ವಿಜಯನಗರ(Vijayanagar): ಪದವಿಯ ನಕಲಿ ಅಂಕಪಟ್ಟಿ ಮತ್ತು ಮೈಗ್ರೇಶನ್ ಪ್ರಮಾಣ ಪತ್ರಗಳನ್ನು ನೀಡಿ ಮುಂಬಡ್ತಿ ಪಡೆದಿದ್ದ ಹಗರಿಬೊಮ್ಮನಹಳ್ಳಿ ತಾಲ್ಲೂಕು ಪಂಚಾಯ್ತಿಯ ಯೋಜನಾಧಿಕಾರಿ ಉಮೇಶ್‍ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶೈಲಾ ಎಸ್. ಕುಲಕರ್ಣಿ ಅವರು ಮಂಗಳವಾರ ಪಟ್ಟಣ ಠಾಣೆಗೆ ದೂರು ಕೊಟ್ಟಿದ್ದರು.

ದೂರು ಆಧರಿಸಿ ಪೊಲೀಸರು ಕ್ರಮ ಜರುಗಿಸಿದ್ದಾರೆ. ಅನುಕಂಪ ಆಧಾರದಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಕೆಲಸ ಪಡೆದ ಉಮೇಶ್ ಗೌಡ ಮುಂಬಡ್ತಿಗಾಗಿ 2007, 2008, 2009ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮಾನಸ ಗಂಗೋತ್ರಿ, ಮೈಸೂರು ಹೆಸರಿನಲ್ಲಿ ಪದವಿಯ ನಕಲಿ ಅಂಕಪಟ್ಟಿಗಳು, ಪಾಸಿಂಗ್ ಸರ್ಟೀಫಿಕೆಟ್ ಹಾಗೂ ನಕಲಿ ಮೈಗ್ರೇಶನ್ ಪ್ರಮಾಣ ಪತ್ರಗಳನ್ನು ಸೃಷ್ಟಿಸಿಕೊಂಡು ಸರ್ಕಾರಕ್ಕೆ ಸಲ್ಲಿಸಿ ತಾಲ್ಲೂಕು ಯೋಜನಾಧಿಕಾರಿಯಾಗಿ ಹುದ್ದೆಗೆ ಮುಂಬಡ್ತಿ ಪಡೆದು ಇಲ್ಲಿನ ತಾಲ್ಲೂಕು ಪಂಚಾಯ್ತಿಯಲ್ಲಿ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.